ಹೊಸದಿಗಂತ ಡಿಜಿಟಲ್ ಡೆಸ್ಕ್:
ಸರ್ಕಾರಿ ಜಾಹಿರಾತಿನಲ್ಲಿ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರ ಚಿತ್ರ ರಾಜ್ಯ ಸರಕಾರ ಕೈ ಬಿಟ್ಟಿದ್ದಾರೆ ಎಂದು ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿರುವ ಬಿಜೆಪಿ, ಕಾಂಗ್ರೆಸ್ ಗೆ ಇಷ್ಟು ಬೇಗ ನೆಹರು ಮುಖ ಮರೆಯಿತೇ ಅಥವಾ ಇದು ಜಾಣ ಕುರುಡೋ? ಎಂದು ಕುಟುಕಿದೆ.
ರಾಜ್ಯ ಸರಕಾರ ಇಂದು ಮುದ್ರಣ ಮಾಧ್ಯಮಗಳಿಗೆ ನೀಡಿದ್ದ ಜಾಹಿರಾತಿನಲ್ಲಿ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರ ಚಿತ್ರ ಕೈ ಬಿಟ್ಟಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬೊಮ್ಮಾಯಿ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದ್ದಾರೆ. ಅತ್ತ ಸಿದ್ದರಾಮಯ್ಯ ಅವರೂ ಕೂಡ ಸರ್ಕಾರದ ವಿರುದ್ಧ ಹರಿಹಾಯ್ದಿದ್ದು, ಜನರ ತೆರಿಗೆ ಹಣದಿಂದ ನೀಡಿರುವ ಜಾಹೀರಾತಿನಲ್ಲಿ ಧೀಮಂತ ಸ್ವಾತಂತ್ರ್ಯ ಹೋರಾಟಗಾರ ನೆಹರೂ ಅವರಿಗೆ ಮಾಡಿರುವ ಅವಮಾನವನ್ನು ಸಹಿಸಲಾಗದು. ಈ ಅವಮಾನಕ್ಕಾಗಿ ರಾಜ್ಯದ ಜನತೆಯ ಕ್ಷಮೆ ಕೇಳಬೇಕು ಎಂದು ಮುಖ್ಯಮಂತ್ರಿಯನ್ನು ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ತನ್ನ ಯಜಮಾನ ನೆಹರೂ ಅವರನ್ನು ಗುರುತಿಸಲಾಗದಷ್ಟು ಮಂಪರು ಕವಿದಿದೆಯೇ?
ಕಾಂಗ್ರೆಸ್ ಇಷ್ಟು ಬೇಗ ನೆಹರು ಮುಖ ಮರೆಯಿತೇ ಅಥವಾ ಇದು ಜಾಣ ಕುರುಡೋ? pic.twitter.com/7GHbxkPFcS
— BJP Karnataka (@BJP4Karnataka) August 14, 2022
ಇದೇ ವಿಚಾರವಾಗಿ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿರುವ ಬಿಜೆಪಿ, ತನ್ನದೇ ಜಾಹಿರಾತು ಮರು ಹಂಚಿಕೆ ಮಾಡಿಕೊಂಡಿದ್ದು, ಅದರೊಟ್ಟಿಗೆ, ‘ಕಾಂಗ್ರೆಸ್ ಪಕ್ಷಕ್ಕೆ ತನ್ನ ಯಜಮಾನ ನೆಹರೂ ಅವರನ್ನು ಗುರುತಿಸಲಾಗದಷ್ಟು ಮಂಪರು ಕವಿದಿದೆಯೇ? ಕಾಂಗ್ರೆಸ್ ಇಷ್ಟು ಬೇಗ ನೆಹರು ಮುಖ ಮರೆಯಿತೇ ಅಥವಾ ಇದು ಜಾಣ ಕುರುಡೋ? ಎಂದು ಪ್ರಶ್ನಿಸಿದೆ.
75ನೇ ಸ್ವತಂತ್ರ ಅಮೃತ ಮಹೋತ್ಸವದ ಅಂಗವಾಗಿ ನೀಡಿದ ಜಾಹೀರಾತಿನಲ್ಲಿ ಸ್ವತಂತ್ರ ಹೋರಾಟದ ಮುಂಚೂಣಿ ನಾಯಕರಾಗಿದ್ದ ನೆಹರುರವರನ್ನು ಕೈಬಿಟ್ಟು ಬಿಜೆಪಿ ಸರ್ಕಾರ ತನ್ನ ರಾಜಕೀಯ ದ್ವೇಷದ ಪರಮಾವಧಿಯನ್ನು ಪ್ರದರ್ಶಿಸಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ @DKShivakumar ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಕ್ಷಮೆಗೆ ಆಗ್ರಹಿಸಿದ್ದಾರೆ. pic.twitter.com/21X3RdfuN6
— Karnataka Congress (@INCKarnataka) August 14, 2022
ಸರ್ಕಾರಿ ಜಾಹಿರಾತಿನಲ್ಲಿ ನೆಹರೂ ಅವರ ಚಿತ್ರವಿದ್ದು, ಅದನ್ನು ಗುರುತಿಸಲಾಗದಷ್ಟರ ಮಟ್ಟಿಗೆ ಕಾಂಗ್ರೆಸ್ ಅವರನ್ನು ಮರೆತು ಹೋಗಿದೆ ಎಂದು ಟೀಕಿಸಿದೆ.