ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಬಿಜೆಪಿ ವಿರುದ್ಧ ರಣತಂತ್ರ ರೂಪಿಸಲು ವಿಪಕ್ಷಗಳು ಬೆಂಗಳೂರಿನಲ್ಲಿ ಸಭೆ ನಡೆಸುತ್ತಿದ್ದು,28 ಪಕ್ಷದ ಪ್ರಮುಖ 80 ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
ಇದರ ಬೆನ್ನಲ್ಲೇ ವಿಪಕ್ಷ ಮೈತ್ರಿಗೆ ತಿರುಗೇಟು ನೀಡಲು ಬಿಜೆಪಿ ಎನ್ಡಿಎ ಮಿತ್ರ ಪಕ್ಷಗಳ ಸಭೆ ನಾಳೆ(ಜು.18)ಕ್ಕೆ ಆಯೋಜಿಸಿದೆ. ಎನ್ಡಿಎ ಸಭೆಗೆ ಬರೋಬ್ಬರಿ 38 ಪಕ್ಷಗಳು ಬೆಂಬಲ ಸೂಚಿಸಿದೆ. ನಾಳೆ ದೆಹಲಿಯಲ್ಲಿ ಅಶೋಕ ಹೊಟೆಲ್ನಲ್ಲಿ ಸಭೆ ನಡೆಯಲಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದಾರೆ.
ಇದೀಗ ಜೆಡಿಎಸ್ ಈ ಸಭೆಯಲ್ಲಿ ಪಾಲ್ಗೊಳ್ಳುತ್ತಾ ಅನ್ನೋ ಪ್ರಶ್ನೆ ಹುಟ್ಟುಕೊಂಡಿದ್ದು, ಅತ್ತ ಕಾಂಗ್ರೆಸ್ ವಿರುದ್ಧ ಸತತ ವಾಗ್ದಾಳಿ ನಡೆಸುತ್ತಿರುವ ಜೆಡಿಎಸ್ಗೆ, ವಿಪಕ್ಷಗಳ ಮೈತ್ರಿಕೂಟಕ್ಕೆ ಅಹ್ವಾನ ನೀಡಿಲ್ಲ. ಇತ್ತ ಎನ್ಡಿಎ ಸಭೆಯಲ್ಲಿ ಪಾಲ್ಗೊಳ್ಳುವ ಕುರಿತು ಆಹ್ವಾನ ಬಂದರೆ ನೋಡುವುದಾಗಿ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಅಜಿತ್ ಪವಾರ್ ನೇತೃತ್ವದ ಎನ್ಸಿಪಿ ಬಣಗಳ ಮುಖಂಡರು ಎನ್ಡಿಎ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಬಿಹಾರದ ಆರ್ ಎಲ್ ಜೆಪಿ ಮುಖಂಡ ರಾಮವಿಲಾಸ್ ಪಾಸ್ವಾನ್ ಪುತ್ರ ಚಿರಾಗ್ ಪಾಸ್ವಾನ್ ಜೊತೆ ಬಿಜೆಪಿ ಮಾತುಕತೆ ನಡೆಸಿದೆ. ಹಿಂದೂಸ್ನಾನ್ ಅವಾಮಿ ಮೋರ್ಚಾದ ದಲಿತ ನಾಯಕ ಬಿಹಾರ ಮಾಜಿ ಸಿಎಂ ಜಿತನ್ ರಾಮ್ ಮಾಂಝಿ, ವಿಕಾಸ್ ಶೀಲ್ ಪಕ್ಷದ ಮುಕೇಶ್ ಸಾಹ್ನಿ, ಉಪೇಂದ್ರ ಸಿಂಗ್ ಖುಶ್ವಾಗೆ ಈಗಾಗಲೇ ಎನ್ಡಿಎ ಕೂಟದ ಸಭೆಯಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿದೆ.
ಉತ್ತರ ಪ್ರದೇಶದ ಒಬಿಸಿ ನಾಯಕ ಓಂ ಪ್ರಕಾಶ್ ರಾಜ್ ಭರ್ ಈಗಾಗಲೇ ಎನ್ ಡಿ ಎ ಮರುಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ.ಪಂಜಾಬಿನ ಅಕಾಲಿದಳ, ಆಂಧ್ರಪ್ರದೇಶದ ತೆಲುಗುದೇಶಂ ಪಕ್ಷಗಳು ಎನ್ ಡಿ ಎ ಕೂಟ ಹಿಂದೆ ದೂರ ಉಳಿಯಲು ನಿರ್ಧರಿಸಿ ಎನ್ನಲಾಗುತ್ತಿದೆ. ಹೀಗಾಗಿ ಆಂಧ್ರಪ್ರದೇಶದಲ್ಲಿ ಪವನ್ ಕಲ್ಯಾಣ ಜನಸೇನಾ ಜೊತೆ ಹಾಗು ಪಂಜಾಬ್ ಏಕಾಂಗಿಯಾಗಿ ಹೋರಾಟ ನಡೆಸಲು ಬಿಜೆಪಿ ಮುಂದಾಗಿದೆ.