ಎಲ್ಲಾ ಗೊಂದಲಗಳಿಗೆ ಬಿಜೆಪಿ ಕಾರಣ: ಡಿ.ಕೆ. ಶಿವಕುಮಾರ್ ಆರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಡ್ಯದ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಬಿಜೆಪಿ ಮುಖಂಡರು ಪ್ರಯತ್ನ ನಡೆಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.

ಬಿಜೆಪಿ ಅಭ್ಯರ್ಥಿಗಳು ಹಲವೆಡೆ ಠೇವಣಿ ಕಳೆದುಕೊಂಡ ಹಿನ್ನೆಲೆಯಲ್ಲಿ ಜೆಡಿಎಸ್ ನೊಂದಿಗೆ ಸೇರಿಕೊಂಡಿದ್ದಾರೆ. ಮಂಡ್ಯದಲ್ಲಿ ರಾಜಕೀಯ ನೆಲೆ ಕಂಡುಕೊಳ್ಳುವ ಉದ್ದೇಶದಿಂದ ಜನರನ್ನು ಎತ್ತಿ ಕಟ್ಟಲು ಪ್ರಯತ್ನಿಸಿದ್ದಾರೆ ಎಂದು ಹೇಳಿದ್ದಾರೆ.

ಮಂಡ್ಯ ಜನ ಸಹಿಷ್ಣುತೆ, ಜಾತ್ಯತೀತತೆ ಹೊಂದಿದವರಾಗಿದ್ದಾರೆ. ಇಂತಹ ವಿಚಾರಗಳಿಗೆ ಅವರು ಮರುಳಾಗುವುದಿಲ್ಲ. ಎಲ್ಲಾ ಗೊಂದಲಗಳಿಗೆ ಬಿಜೆಪಿ ಕಾರಣ. ರಾಜ್ಯದಲ್ಲಿ ಶಾಂತಿ ಸ್ಥಾಪಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!