ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಣಪತಿ ಪ್ರಸಾದ ಪರೀಕ್ಷೆ ಮಾಡಿ ವಿತರಣೆ ವಿಚಾರಕ್ಕೆ, ಹಿಂದೂ ದೇವರುಗಳಿಗೆ ಅಪಮಾನ ಮಾಡಬೇಡಿ. ಸಿಎಂಗೆ ಯಾಕೆ ಹಿಂದೂಗಳ ಬಗ್ಗೆ ಈ ಭಾವನೆ. ಕಾನೂನಿಗೆ ಅಪಮಾನ ಮಾಡಬೇಡಿ ಎಂದು ಕೆಎಸ್ ಈಶ್ವರಪ್ಪ, ಸಿಎಂ ವಿರುದ್ಧ ಗರಂ ಆಗಿದ್ದಾರೆ.
ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರ ಮಾತ್ರವಲ್ಲ ಇಡೀ ದೇಶವೇ ಗಣಪತಿಯನ್ನು ಪೂಜಿಸುತ್ತದೆ. ಗಣಪತಿ ಪ್ರಸಾದ ನೀಡಬೇಕಾದರೆ ಆಹಾರ ನಿಯಂತ್ರಕರಿಂದ ಪರಿಶೀಲಿಸಬೇಕಂತೆ.
ಸಿದ್ದರಾಮಯ್ಯನವರು ಹುಟ್ಟುವ ಮೊದಲೇ ಈ ನಾಡಿನಲ್ಲಿ ಗಣಪತಿಯನ್ನು ಪೂಜಿಸುತ್ತಿದ್ದರು. ಕಾಂಗ್ರೆಸ್ ಪಕ್ಷ ಹುಟ್ಟುವ ಮುನ್ನವೇ ದೇಶದಲ್ಲಿ ಗಣಪತಿ ಇಡಲಾಗುತ್ತಿದೆ. ಈಗ ಸರ್ಕಾರ ಹೊಸ ವ್ಯವಸ್ಥೆ ಮಾಡಿಕೊಳ್ಳುತ್ತಿದೆ ಎಂದು ಕಿಡಿಕಾರಿದ್ದಾರೆ.