ಹಿಂದೂ ಸಂಸ್ಕೃತಿಯನ್ನು ಉಳಿಸುವ ಪಕ್ಷ ಬಿಜೆಪಿ ಒಂದೇ, ಸಿಎಂ ವಿರುದ್ಧ ಈಶ್ವರಪ್ಪ ಗರಂ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗಣಪತಿ ಪ್ರಸಾದ ಪರೀಕ್ಷೆ ಮಾಡಿ ವಿತರಣೆ ವಿಚಾರಕ್ಕೆ, ಹಿಂದೂ ದೇವರುಗಳಿಗೆ ಅಪಮಾನ ಮಾಡಬೇಡಿ. ಸಿಎಂಗೆ ಯಾಕೆ ಹಿಂದೂಗಳ ಬಗ್ಗೆ ಈ ಭಾವನೆ. ಕಾನೂನಿಗೆ ಅಪಮಾನ ಮಾಡಬೇಡಿ ಎಂದು ಕೆಎಸ್ ಈಶ್ವರಪ್ಪ, ಸಿಎಂ ವಿರುದ್ಧ ಗರಂ ಆಗಿದ್ದಾರೆ.

ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರ ಮಾತ್ರವಲ್ಲ ಇಡೀ ದೇಶವೇ ಗಣಪತಿಯನ್ನು ಪೂಜಿಸುತ್ತದೆ. ಗಣಪತಿ ಪ್ರಸಾದ ನೀಡಬೇಕಾದರೆ ಆಹಾರ ನಿಯಂತ್ರಕರಿಂದ ಪರಿಶೀಲಿಸಬೇಕಂತೆ.

ಸಿದ್ದರಾಮಯ್ಯನವರು ಹುಟ್ಟುವ ಮೊದಲೇ ಈ ನಾಡಿನಲ್ಲಿ ಗಣಪತಿಯನ್ನು ಪೂಜಿಸುತ್ತಿದ್ದರು. ಕಾಂಗ್ರೆಸ್ ಪಕ್ಷ ಹುಟ್ಟುವ ಮುನ್ನವೇ ದೇಶದಲ್ಲಿ ಗಣಪತಿ ಇಡಲಾಗುತ್ತಿದೆ. ಈಗ ಸರ್ಕಾರ ಹೊಸ ವ್ಯವಸ್ಥೆ ಮಾಡಿಕೊಳ್ಳುತ್ತಿದೆ ಎಂದು ಕಿಡಿಕಾರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!