ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆಗೆ ರಾಜ್ಯ ಬಿಜೆಪಿ-ಜೆಡಿಎಸ್ ಮೈತ್ರಿ ಚರ್ಚೆ ನಡೆಯುತ್ತಿದ್ದು, ಅಂತಿಮ ನಿರ್ಧಾರ ಮೋದಿ, ಅಮಿತ್ ಶಾ ಕೈಗೊಳ್ಳಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಕೇಂದ್ರ ಚುನಾವಣಾ ಸಮಿತಿಯ ಸಭೆಯಲ್ಲಿ ಚುನಾವಣೆ ತಯಾರಿಗೆ ಸಂಬಂಧಿಸಿದ ಸಭೆಯಲ್ಲಿ ದೆಹಲಿಗೆ ತೆರಳಿದ ಅವರು, ನರೇಂದ್ರ ಮೋದಿ, ಅಮಿತ್ ಶಾ ಮನಸ್ಸಿನಲ್ಲೇನಿದೆ ಎಂಬುದು ನಮಗೆ ತಿಳಿದಿಲ್ಲ. ಚರ್ಚೆಗಳು ಇನ್ನೂ ನಡೆಯುತ್ತಿವೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಸ್ಥಾನ ಹಂಚಿಕೆ ಬಗ್ಗೆ ಚರ್ಚೆ ನಡೆಸುವುದು ಕೇಂದ್ರ ನಾಯಕರಿಗೆ ಬಿಟ್ಟ ವಿಷಯವಾಗಿದೆ, ಈ ಬಗ್ಗೆ ತಾವು ಹೇಳುವುದು ಏನಿಲ್ಲ, ಸಲಹೆಯನ್ನೂ ನೀಡುವುದಿಲ್ಲ ಎಂದು ಹೇಳಿದ್ದಾರೆ.