ಹೊಸದಿಗಂತ ವರದಿ ರಾಮನಗರ:
ಹೊಸದಿಗಂತ ವರದಿ ರಾಮನಗರ : ಹಳೇ ಮೈಸೂರು ಭಾಗದಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಸೇರಿದಂತೆ ಹಲವರನ್ನು ಬಿಜೆಪಿಗೆ ಆಹ್ವಾನಿಸಿದ್ದು, ಶೀಘ್ರವೇ ಅವರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ತಿಳಿಸಿದರು.
ನಗರದಲ್ಲಿ ಗುರುವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, ಹಳೇ ಮೈಸೂರು ಭಾಗದಲ್ಲಿ ಎಲ್ಲರೂ ಪಕ್ಷ ಸಂಘಟನೆಗೆ ಶ್ರಮ ಹಾಕಿದ್ದೇವೆ. ಮಂಡ್ಯದ ಮಾಜಿ ಐಆರ್ಎಸ್ ಅಧಿಕಾರಿ ಲಕ್ಷ್ಮಿ ಅಶ್ವಿನ್ ಕುಮಾರ್ ಅವರನ್ನೂ ಬಿಜೆಪಿಗೆ ಆಹ್ವಾನಿಸಿದ್ದೇವೆ ಎಂದರು.