ಕೇಜ್ರೀವಾಲ್‌ ಗೆ ಬೆದರಿಕೆ ಆರೋಪ : ಬಿಜೆಪಿ ಮುಖಂಡ ಅರೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಗೆ ಬೆದರಿಕೆ ಹಾಕಿರುವ ಆರೋಪದ ಮೇಲೆ ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಕಾರ್ಯದರ್ಶಿ ತಜೀಂದರ್‌ ಪಾಲ್‌ ಸಿಂಗ್‌ ಬಗ್ಗಾ ಅವರನ್ನು ಪಂಜಾಬ್ ಪೋಲೀಸರು ಬಂಧಿಸಿದ್ದಾರೆ.

ಬಗ್ಗಾ ಅವರು ಅವಹೇಳನ ಕಾರಿಯಾಗಿ ಮಾತನಾಡುತ್ತಾರೆ, ಎರಡು ಸಮುದಾಯಗಳ ನಡುವೆ ಸಂಘರ್ಷಕ್ಕೆ ಕಾರಣವಾಗುವಂತ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಾರೆ. ಅಲ್ಲದೇ ಅವರು ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ʼಬದುಕಲು ಬಿಡುವುದಿಲ್ಲʼ ಎಂದು ಬೆದರಿಕೆ ಹಾಕಿದ್ದಾರೆ ಎಂದು ಆಮ್ ಆದ್ಮಿ ಪಕ್ಷವು ಆರೋಪಿಸಿದೆ. ಈಕುರಿತು ಆಪ್‌ ಮುಖಂಡ ಸನ್ನಿಸಿಂಗ್‌ ದೂರು ದಾಖಲಿಸಿದ್ದು ಇಂದು ಬೆಳಿಗ್ಗೆ ಸುಮಾರು 50 ಪೋಲೀಸ್‌ ಸಿಬ್ಬಂದಿಗಳು ಬಗ್ಗಾ ಅವರನ್ನು ಬಂಧಿಸಿ ಎಳೆದೊಯ್ದಿದ್ದಾರೆ. ‌

ಈ ಕುರಿತು “ಆಪ್‌ ದ್ವೇಷದ ರಾಜಕಾರಣ ಮಾಡುತ್ತಿದೆ” ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!