ಹೊಸದಿಗಂತ ಡಿಜಿಟಲ್ ಡೆಸ್ಕ್ :
ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಬಿಜೆಪಿಗೆ ಮತ್ತೊಂದು ಆಘಾತವಾಗಿದೆ. ಸಚಿವ ಡಾ.ಸುಧಾಕರ್ ಬೆಂಬಲಿಗ ಬಿಜೆಪಿ ಮುಖಂಡ ಬಿ.ಸತೀಶ್ (56) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ಕರಗ ಉತ್ಸವ ಹಿನ್ನೆಲೆ ಸಚಿವ ಡಾ.ಸುಧಾಕರ್ ಜತೆ ಧರ್ಮರಾಯಸ್ವಾಮಿ ದೇಗುಲಕ್ಕೆ ಸತೀಶ್ ಭೇಟಿ ನೀಡಿದ್ದರು. ಬಳಿಕ ಚಿಕ್ಕಬಳ್ಳಾಪುರಕ್ಕೆ ತೆರಳಿದ್ದರು.
ಇಂದು ಮುಂಜಾನೆ ಚಿಕ್ಕಬಳ್ಳಾಪುರದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.