ಹೊಸದಿಗಂತ ಡಿಜಿಟಲ್ ಡೆಸ್ಕ್ :
ಕೊಪ್ಪಳ ವಿಧಾನಸಭೆ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮುಖಂಡ ಸಿ ವಿ ಚಂದ್ರಶೇಖರ್ ಅವರು ಟಿಕೆಟ್ ಸಿಗದ ಕಾರಣ ಅಸಮಾಧಾನಗೊಂಡಿದ್ದು, ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಬಳಿಕ ಜೆಡಿಎಸ್ ಸೇರ್ಪಡೆಯಾದರು.
ಎಚ್ ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಪಕ್ಷ ಸೇರಿದ ಅವರು ಜೆಡಿಎಸ್ ನಿಂದ ಬಿ ಫಾರಂ ಪಡೆದಿದ್ದಾರೆ. ಸಿವಿ ಚಂದ್ರಶೇಖರ್ ಅವರಿಗೆ ಸುರೇಶ ಭೂಮರಡ್ಡಿ ಸೇರಿ ಹಲವರು ಸಾಥ್ ನೀಡಿದರು.
ಸಿ ವಿ ಚಂದ್ರಶೇಖರ್ ಕೊಪ್ಪಳ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದು, ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ.