ಹೊಸದಿಗಂತ ಡಿಜಿಟಲ್ ಡೆಸ್ಕ್:
ಅನಾರೋಗ್ಯದ ಕಾರಣದಿಂದ ಈ ಬಾರಿ ಲೋಕಸಭಾ ಚುನಾವಣೆ ಪ್ರಚಾರ ಕಾರ್ಯದಿಂದ ಬಿಜೆಪಿ ನಾಯಕಿ ಖುಷ್ಬೂ ಸುಂದರ್ ದೂರ ಉಳಿದಿದ್ದಾರೆ .
ಈ ಕುರಿತು ಖುದ್ದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿರುವ ಖುಷ್ಬೂ ಅವರು, ‘2019ರಲ್ಲಿ ಮೂಳೆ ಮುರಿತ ಅನುಭವಿಸಿದ್ದೆ, ಅದರ ನೋವು ಕಳೆದ ಐದು ವರ್ಷಗಳಿಂದ ನನ್ನನ್ನು ಕಾಡುತ್ತಿದೆ.ಹೀಗಾಗಿ ಹೆಚ್ಚು ಹೊತ್ತು ಕುಳಿತುಕೊಳ್ಳುವಂತಿಲ್ಲ, ಅಲ್ಲದೆ ದೂರದ ಪ್ರಯಾಣ ಮಾಡುವಂತಿಲ್ಲ, ಆದರೆ ಇವರೆಡು ಚುನಾವಣಾ ಪ್ರಚಾರ ಕಾರ್ಯಕ್ಕೆ ಮುಖ್ಯ. ಆದ್ದರಿಂದ ಈ ಬಾರಿಯ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುತ್ತಿಲ್ಲ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
At times, hard decisions have to be taken and focus needs to be on one's health. I am at such a juncture today. I have dedicated myself to @BJP4India and have been following the path of our beloved PM @narendramodi ji, immersing myself in the election campaign activities. But… pic.twitter.com/tuevsqczok
— KhushbuSundar (Modi ka Parivaar) (@khushsundar) April 7, 2024
ಖುಷ್ಬೂ ಅವರು ವೈದ್ಯರ ಸಲಹೆಯ ಹೊರತಾಗಿಯೂ ಕೆಲವು ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, ಆರೋಗ್ಯ ಮತ್ತಷ್ಟು ಹದಗೆಡಲು ಕಾರಣವಾಗಿದೆ. ವೈದ್ಯರು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.