ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಹತ್ಯೆ ಪ್ರಕರಣ: ಶಂಕಿತ ಆರೋಪಿಗಳಿಬ್ಬರಿಗೆ ಜಾಮೀನು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಹತ್ಯೆ ಪ್ರಕರಣದ ಶಂಕಿತ ಆರೋಪಿಗಳಾದ ದತ್ತಪ್ರಸಾದ್ ಗಾಂವ್ಕರ್ ಮತ್ತು ರಾಮದಾಸ್ ಅಲಿಯಾಸ್ ರಾಮ ಮಾಂದ್ರೇಕರ್ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಎನ್‍ಡಿಪಿಎಸ್ ನ್ಯಾಯಾಲಯ ರೂ. ತಲಾ 15,000 ರೂ.ಗಳ ಇಬ್ಬರು ಸ್ಥಳೀಯ ಶ್ಯೂರಿಟಿಗಳೊಂದಿಗೆ ಜಾಮೀನು ನೀಡಲಾಗಿದೆ.

ಮಾಪ್ಸಾ ಹೆಚ್ಚುವರಿ ಮತ್ತು ಜಿಲ್ಲಾ ಸೆಷನ್ಸ್ ನ್ಯಾಯಾಲಯ ಕರ್ಲಿಸ್ ರೆಸ್ಟೋರೆಂಟ್ ಚಾಲಕ ಎಡ್ವಿನ್ ನುನಿಸ್ ಅವರಿಗೆ ಸಪ್ಟೆಂಬರ್ 7 ರಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಅವರು ಈ ಹಿಂದೆ ಸೋನಾಲಿ ಫೋಗಟ್ ಸಾವಿನ ಪ್ರಕರಣದಲ್ಲಿ ಸಂಬಂಧ ಹೊಂದಿದ್ದರು. ಆದರೆ, ಶಂಕಿತ ವ್ಯಕ್ತಿಯನ್ನು ಕರ್ಲಿ ರೆಸ್ಟೋರೆಂಟ್‍ಗೆ ಹೋಗಲು ಬಿಡಬಾರದು ಎಂಬ ಮಹತ್ವದ ಷರತ್ತು ವಿಧಿಸಲಾಗಿದೆ. ಆ ಬಳಿಕ ಶಂಕಿತ ಆರೋಪಿಗಳಾದ ದತ್ತಪ್ರಸಾದ್ ಗಾಂವ್ಕರ್ ಮತ್ತು ರಾಮದಾಸ್ ಅಲಿಯಾಸ್ ರಾಮ ಮಾಂದ್ರೇಕರ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
ಈ ನಡುವೆ ಸೋನಾಲಿ ಫೋಗಟ್ ಪ್ರಕರಣದ ತನಿಖೆಯನ್ನು ಸಿಬಿಐ ಅಧಿಕಾರಿಗಳ ತಂಡ ತೀವ್ರಗೊಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!