ಪ್ರಧಾನಿ ಆಗಮನ ವೇಳೆ ಬ್ಯಾರಿಕೇಡ್ ಹಿಂದೆ ಬಿಜೆಪಿ ನಾಯಕರು: ಇದು ಅತ್ಯಂತ ಅನುಕರಣನೀಯ ಮಾದರಿ ಎಂದ ಬೊಮ್ಮಾಯಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಚಂದ್ರಯಾನ 3 ಯಶಸ್ಸಿನ ಹಿನ್ನೆಲೆಯಲ್ಲಿ ಶನಿವಾರ ಮುಂಜಾನೆ ಪ್ರಧಾನಿ ನರೇಂದ್ರ ಮೋದಿ ಇಸ್ರೊ ವಿಜ್ಞಾನಿಗಳನ್ನು ಸನ್ಮಾನಿಸಲು ಆಗಮಿಸಿದಾಗ ಬಿಜೆಪಿ ನಾಯಕರು ಸಾರ್ವಜನಿಕರೊಂದಿಗೆ ನಿಂತಿದ್ದು, ಈ ಕುರಿತು ಕಾಂಗ್ರೆಸ್ ವ್ಯಂಗ್ಯವಾಡಿದ್ದು, ಈ ಕುರಿತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರೋಟೋಕಾಲ್‌ ಪಾಲನೆಯಲ್ಲಿ ಯಾವುದೇ ಗೊಂದಲ ಇರಲಿಲ್ಲ. ನಾವೆಲ್ಲ ಸಾರ್ವಜನಿಕ ಜೀವನಕ್ಕೆ ಬಂದಿರುವುದು ಸೇವೆ ಮಾಡಲು.ಇಸ್ರೋದಂಥ ಸಂಸ್ಥೆ, ವಿಜ್ಞಾನಿಗಳು ಇಂಥ ದೊಡ್ಡ ಸಾಧನೆ ಮಾಡಿದಾಗ ನಾವು ಒಂದು ಹೆಜ್ಜೆ ಹಿಂದೆ ಸರಿಯಬೇಕು. ನಾವು ಹಿಂದೆ ಸರಿದು ಅವರಿಗೆ ಮಹತ್ವ ಕೊಡಬೇಕು. ಸೇವಾ ಮನೋಭಾವದಿಂದ ಸಾಮಾನ್ಯ ಜನರ ನಡುವೆ ನಮ ನಾಯಕರು ಇದ್ದು ಆ ಕೆಲಸ ಮಾಡಿದ್ದಾರೆ. ಅದನ್ನು ತಿಳಿದುಕೊಳ್ಳುವ, ಹೊಗಳುವ ಮನಸುಗಳು ಬೇಕಷ್ಟೇ ಎಂದರು.

ಇಸ್ರೋ ಅಧ್ಯಕ್ಷರು ಮೂರು ನಿಮಿಷ ಮಾತನಾಡಿ ಸಾಧನೆಗೆ ಕಾರಣರಾದವರಿಗೆ ಮುಂದೆ ಬಿಟ್ಟರು. ಇದರರ್ಥ ಇಸ್ರೋ ಅಧ್ಯಕ್ಷರು ಹಿಂದೆ ಸರಿದರು ಅಂತಲ್ಲ. ನಮ್ಮ ನಾಯಕರು ಹಿಂದೆ ಸರಿದು ನಿಂತು ಜನರನ್ನು ಮುಂದೆ ಬಿಟ್ಟಿದ್ದಾರೆ ಎಂದು ಸಮರ್ಥಿಸಿಕೊಂಡರು. ಇಸ್ರೋ ವಿಜ್ಞಾನಿಗಳಿಗೆ ಅಭಿನಂದಿಸಲು ಪ್ರಧಾನಿಯವರು ಬಂದಾಗ ಜನರ ಮಧ್ಯೆ ನಮ್ಮ ನಾಯಕರು ನಿಂತಿದ್ದಾರೆ. ನಮ್ಮ ನಾಯಕರು ಅತ್ಯಂತ ಮಾದರಿಯಾದ ಅನುಕರಣೀಯ ನಡವಳಿಕೆ ತೋರಿದ್ದಾರೆ. ಇವತ್ತಿನ ದಿನ ಎಲ್ಲರೂ ತಮ್ಮ ಸ್ಥಾನಮಾನಕ್ಕೆ ಪೈಪೋಟಿ ಮಾಡುತ್ತಾರೆ. ನಮ್ಮ ನಾಯಕರು ಅತ್ಯಂತ ಅನುಕರಣನೀಯ ಮಾದರಿ ಅನುಸರಿಸಿದ್ದಾರೆ ಎಂದರು.

ಬಿಜೆಪಿ ನಾಯಕರು ಬೀದಿ ಪಾಲಾದರು, ಬ್ಯಾರಿಕೇಡ್ ಬಂಧಿ ಆದರು ಅಂತ ಕಾಂಗ್ರೆಸ್ ನವರು ಹೇಳಿರುವುದು ಅವರ ಮನಸ್ಥಿತಿ ತೋರಿಸುತ್ತದೆ ಎಂದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!