ನಾಳೆಯಿಂದ ನೆರೆ ಪೀಡಿತ ಪ್ರದೇಶಗಳಿಗೆ ಬಿಜೆಪಿ ನಾಯಕರ ಪ್ರವಾಸ: 6 ತಂಡಗಳ ರಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಜ್ಯದ ನೆರೆ ಪೀಡಿತ ಪ್ರದೇಶಗಳಿಗೆ ರಾಜ್ಯ ಬಿಜೆಪಿ ನಾಯಕರು ನಾಳೆಯಿಂದ ಭೇಟಿ ನೀಡುವ ಉದ್ದೇಶದಿಂದ ಆರು ತಂಡಗಳನ್ನು ರಚಿಸಲಾಗಿದೆ.

ವಿಪಕ್ಷ ನಾಯಕ ಆರ್ ಅಶೋಕ್, ಶಾಸಕರಾದ ಅರಗ ಜ್ಞಾನೇಂದ್ರ, ಡಾ. ಸಿ.ಎನ್. ಅಶ್ವತ್ಥ ನಾರಾಯಣ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಅರವಿಂದ ಬೆಲ್ಲದ್ ಹಾಗೂ ಬಿ.ಶ್ರೀರಾಮುಲು ಅವರ ನೇತೃತ್ವದಲ್ಲಿನ ತಂಡಗಳು ನೆರೆ ಪೀಡಿತ ಪ್ರದೇಶಗಳಲ್ಲಿ ಭೇಟಿ ನೀಡಿ, ಪರಿಶೀಲನೆ ನಡೆಸಲಿವೆ ಎಂದು ಪ್ರಕಟಣೆ ತಿಳಿಸಿದೆ.

ಆರ್.ಅಶೋಕ್ ನೇತೃತ್ವದ ತಂಡ ಮಂಗಳೂರು, ಬೆಳಗಾವಿ ಜಿಲ್ಲೆಗಳಲ್ಲಿ ಅರಗ ಜ್ಞಾನೇಂದ್ರ ನೇತೃತ್ವದ ತಂಡ ಶಿವಮೊಗ್ಗ ಜಿಲ್ಲೆಯಲ್ಲಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರ ತಂಡ ಕೊಡಗು ಹಾಗೂ ಉಡುಪಿ ಜಿಲ್ಲೆಗಳಿಗೆ ಭೇಟಿ ನೀಡಲಿದ್ದು, ನೆರೆಯಿಂದಾಗಿರುವ ಹಾನಿ ಕುರಿತು ಪರಿಶೀಲನೆ ನಡೆಸಲಿದೆ.

ಛಲವಾದಿ ನಾರಾಯಣಸ್ವಾಮಿ ನೇತೃತ್ವದ ತಂಡ ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಅರವಿಂದ್ ಬೆಲ್ಲದ್ ನೇತೃತ್ವದ ತಂಡ ಬಾಗಲಕೋಟೆ, ವಿಜಯಪುರ ಹಾಗೂ ಬಿ.ಶ್ರೀರಾಮುಲು ಅವರ ತಂಡ ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!