ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದರು.
ಪ್ರಣಾಳಿಕೆಯಲ್ಲಿ ಏನೇನಿದೆ?
- ಲವ್ ಜಿಹಾದ್ ಪ್ರಕರಣಗಳಲ್ಲಿ ಒಂದು ಲಕ್ಷ ರೂ. ದಂಡ, ಕನಿಷ್ಠ 10 ವರ್ಷ ಜೈಲು
- ನೀರಾವರಿಗಾಗಿ ರೈತರಿಗೆ ಉಚಿತ ವಿದ್ಯುತ್
- ಕನಿಷ್ಠ ಬೆಂಬಲ ಬೆಲೆಯಲ್ಲಿ ಗೋಧಿ ಮತ್ತು ಭತ್ತದ ಖರೀದಿಗೆ ಬಲ
- ರಾಣಿ ಲಕ್ಷ್ಮಿಬಾಯಿ ಯೋಜನೆ ಅಡಿಯಲ್ಲಿ ಕಾಲೇಜಿಗೆ ಹೋಗುವ ಹುಡುಗಿಯರಿಗೆ ಉಚಿತ ಸ್ಕೂಟಿ
- 60 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಉಚಿತ ಸಾರ್ವಜನಿಕ ಸಾರಿಗೆ
- ಪ್ರಧಾನಮಂತ್ರಿಯವರ ಉಜ್ವಲ ಯೋಜನೆಯಡಿ ದೀಪಾವಳಿ ಮತ್ತು ಹೋಳಿ ಹಬ್ಬದ ವೇಳೆ ಎರಡು ಉಚಿತ ಎಲ್ಪಿಜಿ ಸಿಲಿಂಡರ್
ಪ್ರಧಾನಿ ಮೋದಿ ಅವರು ಉತ್ತರಾಖಂಡ, ಉತ್ತರ ಪ್ರದೇಶ ಮತ್ತು ಪಂಜಾಬ್ನಲ್ಲಿ ವರ್ಚ್ಯುಯಲ್ ರ್ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ.