ಪ್ರವಾದಿ ಕುರಿತ ಹೇಳಿಕೆ: ಬಿಜೆಪಿಯಿಂದ ಶಾಸಕ ರಾಜಾಸಿಂಗ್‌ ಅಮಾನತು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪ್ರವಾದಿ ಮೊಹಮದ್‌ ಕುರಿತು ಹೇಳಿಕೆ ವಿಚಾರವಾಗಿ ಬಂಧನವಾಗಿರುವ ಬಿಜೆಪಿ ಶಾಸಕ ರಾಜಾಸಿಂಗ್‌ನನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಗೋಶಾಮಹಲ್ ಶಾಸಕ ರಾಜಾಸಿಂಗ್ ಅವರನ್ನು ಬಿಜೆಪಿಯ ಕೇಂದ್ರ ಶಿಸ್ತು ಸಮಿತಿಯು ಪಕ್ಷದ ನೀತಿಗಳಿಗೆ ವ್ಯತಿರಿಕ್ತವಾಗಿ ಹೇಳಿಕೆ ನೀಡಿದ್ದಕ್ಕಾಗಿ ಅಮಾನತುಗೊಳಿಸಲಾಗಿದೆ ಎಂದು ಬಿಜೆಪಿ ಪ್ರಕಟಿಸಿದೆ. ಬಿಜೆಪಿ ಶಿಸ್ತು ನಿಯಮ XXV10 (a)ಉಲ್ಲಂಘನೆ ಆರೋಪದ ಅಡಿಯಲ್ಲಿ ರಾಜಾಸಿಂಗ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಕೇಂದ್ರ ಶಿಸ್ತು ಸಮಿತಿ ಸದಸ್ಯ ಕಾರ್ಯದರ್ಶಿ ಓಂ ಪಾಠಕ್ ತಿಳಿಸಿದರು.

ಮುಂದಿನ ತನಿಖೆ ಬಾಕಿ ಇದ್ದು, ಅಲ್ಲಿಯವರೆಗೆ ಪಕ್ಷದ ಜವಾಬ್ದಾರಿಯಿಂದ ಅಮಾನತುಗೊಳಿಸಲಾಗಿದೆ ಎಂದು ಅಮಾನತು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ರಾಜಾಸಿಂಗ್ ಅವರನ್ನು ಪಕ್ಷದಿಂದ ಏಕೆ ಅಮಾನತುಗೊಳಿಸಬಾರದು ಎಂದು ವಿವರಿಸುವಂತೆ ಪಕ್ಷವು ಆದೇಶಿಸಿದ್ದು, ಇದಕ್ಕಾಗಿ ಹತ್ತು ದಿನಗಳ ಗಡುವು ಕೊಟ್ಟಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!