ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರದ ಮಾಜಿ ರಾಜ್ಯ ಸಚಿವ ಹಾಗೂ ಬಿಜೆಪಿ ಸಾಂಸದ ರತನ್ ಲಾಲ್ ಕಟಾರಿಯಾ (72) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಚಂಡೀಗಢದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ರತನ್ ಲಾಲ್ ಕಟಾರಿಯಾ ಅವರ ಪತ್ನಿ ಭಂಟೋ ಕಟಾರಿಯಾ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ.
ರತನ್ ಲಾಲ್ ಕಟಾರಿಯಾ ಅಂಬಾಲಾ ಕ್ಷೇತ್ರವನ್ನು ಪ್ರತಿನಿಧಿಸಿ 2019-21 ರ ನಡುವೆ ಕೇಂದ್ರ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಕಟಾರಿಯಾ ನಿಧನಕ್ಕೆ ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಸಂತಾಪ ಸೂಚಿಸಿದ್ದಾರೆ. ತ್ರಿಪುರಾ ಮಾಜಿ ಸಿಎಂ ಬಿಪ್ಲವ್ ಕುಮಾರ್ ದೇಬ್ ಅವರು ಬುಧವಾರ ರತನ್ ಲಾಲ್ ಅವರನ್ನು ಆಸ್ಪತ್ರೆಗೆ ಭೇಟಿ ಮಾಡಿ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು. ಇಂದು ಬೆಳಿಗ್ಗೆ ರತನ್ ಲಾಲ್ ಅವರ ನಿಧನದ ಸುದ್ದಿ ಕೇಳಿ ಆಘಾತವಾಯಿತು ಎಂದಿದ್ದಾರೆ.
ರತನ್ ಲಾಲ್ ಕಟಾರಿಯಾ ಮೂರು ಬಾರಿ ಸಂಸತ್ತಿಗೆ ಆಯ್ಕೆಯಾದರು. 2019-21 ರ ನಡುವೆ ಜಲವಿದ್ಯುತ್ ಮತ್ತು ಸಾಮಾಜಿಕ ನ್ಯಾಯ ಇಲಾಖೆಗಳ ಕೇಂದ್ರ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ರತನ್ ಲಾಲ್ ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 12 ಗಂಟೆಗೆ ಚಂಡೀಗಢದ ಮಣಿಮಜ್ರಾದಲ್ಲಿ ನಡೆಯಲಿದೆ.