ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ವಿ ಶ್ರೀನಿವಾಸಪ್ರಸಾದ್ ಅವರು ಅಸ್ವಸ್ಥರಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸದ್ಯ ಅವರಿಗೆ ವೆಂಟಿಲೇಟರ್ನಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಮವಾರ ಸಂಜೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಾಲಿಗೆ ಗಂಭೀರ ಗಾಯವಾಗಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಸ್ತುತ ಶ್ರೀನಿವಾಸಪ್ರಸಾದ್ಗೆ ಡಾ. ಸುದರ್ಶನ್ ಬಲ್ಲಾಳ್ ಚಿಕಿತ್ಸೆ ನೀಡುತ್ತಿದ್ದಾರೆ.
ಇನ್ನೆರಡು ದಿನಗಳ ಕಾಲ ಅವರು ತೀವ್ರ ನಿಗಾ ಘಟಕದಲ್ಲಿರಲಿದ್ದಾರೆ. ಬಳಿಕ ವಾರ್ಡ್ಗೆ ವರ್ಗಾಯಿಸಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ. .