ಬಿಜೆಪಿ ಸಂಸದ ವಿ ಶ್ರೀನಿವಾಸಪ್ರಸಾದ್‌ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ವಿ ಶ್ರೀನಿವಾಸಪ್ರಸಾದ್‌ ಅವರು ಅಸ್ವಸ್ಥರಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸದ್ಯ ಅವರಿಗೆ ವೆಂಟಿಲೇಟರ್‌ನಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಮವಾರ ಸಂಜೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಾಲಿಗೆ ಗಂಭೀರ ಗಾಯವಾಗಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಸ್ತುತ ಶ್ರೀನಿವಾಸಪ್ರಸಾದ್‌ಗೆ ಡಾ. ಸುದರ್ಶನ್ ಬಲ್ಲಾಳ್‌ ಚಿಕಿತ್ಸೆ ನೀಡುತ್ತಿದ್ದಾರೆ.

ಇನ್ನೆರಡು ದಿನಗಳ ಕಾಲ ಅವರು ತೀವ್ರ ನಿಗಾ ಘಟಕದಲ್ಲಿರಲಿದ್ದಾರೆ. ಬಳಿಕ ವಾರ್ಡ್‌ಗೆ ವರ್ಗಾಯಿಸಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ. .

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!