ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿ ಮಾಡಿದ ಬೆನ್ನಲ್ಲೇ ಬಿಜೆಪಿ ಅಲರ್ಟ್ ಆಗಿದ್ದು, ಇಂದು ಬಿಎಸ್ ಯಡಿಯೂರಪ್ಪ ತರಾತುರಿಯಲ್ಲಿ ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿ ಮಾಡಲು ನಿರ್ಧರಿಸಿದ್ದಾರೆ.
ಹೌದು, 6 ವರ್ಷಗಳ ನಂತರ ಶ್ರೀನಿವಾಸ ಪ್ರಸಾದ್ ಅವರ ನಿವಾಸಕ್ಕೆ ತೆರಳಿದ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲು ಹನ್ನೆರಡು ನಿಮಿಷ ಕಾದಿದ್ದರು. ಈ ಸಭೆಯಲ್ಲಿ ಸಂಸದೀಯ ಅಭ್ಯರ್ಥಿಗಳನ್ನು ಬೆಂಬಲಿಸುವ ಕುರಿತು ಅಭಿಪ್ರಾಯಗಳನ್ನು ಚರ್ಚಿಸಲಾಗಿದ್ದು. ಈ ವಿಷಯಕ್ಕೆ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ ಎನ್ನಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸುವ ಒಂದು ದಿನದ ಮುನ್ನ ಈ ಬೆಳವಣಿಗೆ ನಡೆದಿರುವುದು ಬಿಜೆಪಿಗೆ ನಿಸ್ಸಂದೇಹವಾಗಿ ನಷ್ಟ ತಂದಿದೆ. ಸದ್ಯ ಸನ್ನದ್ಧರಾಗಿರುವ ಯಡಿಯೂರಪ್ಪನವರು ಇಂದು ಶ್ರೀನಿವಾಸ ಪ್ರಸಾದ್ ಅವರನ್ನು ಭೇಟಿ ಮಾಡಿ ಸಮಾಧಾನಪಡಿಸಲು ನಿರ್ಧರಿಸಿದ್ದಾರೆ.