August 31, 2026
Monday, August 31, 2026
spot_img

ಬಿಡದಿ ಟೌನ್‌ಶಿಪ್‌ ವಿರೋಧಿಸಿ ಬೆಂಗಳೂರಿನಿಂದ ಬಿಡದಿವರೆಗೆ ಬೃಹತ್‌ ಪಾದಯಾತ್ರೆಗೆ ಮುಂದಾದ ಬಿಜೆಪಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರಿನ ಬಿಡದಿ ಬಳಿಯ ಟೌನ್‌ಶಿಪ್‌ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಲು ರಾಜ್ಯ ಬಿಜೆಪಿ ನಾಯಕರು ಬೆಂಗಳೂರಿನಿಂದ ಬಿಡದಿವರೆಗೆ ಬೃಹತ್‌ ಪಾದಯಾತ್ರೆಗೆ ಮುಂದಾಗಿದ್ದಾರೆ.

ಸ್ಯಾಟಲೈಟ್ ಟೌನ್‌ಶಿಪ್ ಅಭಿವೃದ್ಧಿಯ ನೆಪದಲ್ಲಿ ರಾಜ್ಯ ಸರ್ಕಾರ ಬಿಡದಿಯಲ್ಲಿರುವ ಫಲವತ್ತಾದ ಕೃಷಿ ಭೂಮಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದ ವಿಜಯೇಂದ್ರ, ಈ ಯೋಜನೆಯು ಕೇವಲ ರಿಯಲ್ ಎಸ್ಟೇಟ್ ಹಿತಾಸಕ್ತಿಗಳಿಗೆ ಲಾಭ ಮಾಡಿಕೊಡುವ ಉದ್ದೇಶ ಹೊಂದಿದೆ ಎಂದು ದೂರಿದರು.

ರಾಜ್ಯ ಸರ್ಕಾರದಿಂದ ರೈತ ಪರವಾದ ಯಾವುದೇ ನಿರ್ಧಾರವನ್ನು ನಾವು ಕಾಣುತ್ತಿಲ್ಲ. ಸರ್ಕಾರ ಭೂಸ್ವಾಧೀನ ಅಧಿಸೂಚನೆಯನ್ನು ಹೊರಡಿಸುತ್ತದೆ. ನಂತರ ಯೋಜನೆಯ ಸಾಧಕ-ಬಾಧಕಗಳನ್ನು ಪರಿಶೀಲಿಸಲು ಮೂವರು ಸದಸ್ಯರ ಸಮಿತಿಯನ್ನು ರಚಿಸುತ್ತಾರೆ. ಇವೆಲ್ಲವೂ ಕೇವಲ ನಾಟಕ ಎಂದು ಅವರು ಹೇಳಿದರು.

ರೈತರ ಪರವಾಗಿ ಧ್ವನಿ ಎತ್ತಲು ಬಿಜೆಪಿ ನಿರ್ಧರಿಸಿದ್ದು, ನಾವು ಅವರೊಂದಿಗೆ ಕೈಜೋಡಿಸುತ್ತೇವೆ. ನಾವು ಪಾದಯಾತ್ರೆಯನ್ನು ನಡೆಸಲಿದ್ದು, ಪಕ್ಷದ ನಾಯಕರೊಂದಿಗೆ ಚರ್ಚಿಸಿದ ನಂತರ ಶೀಘ್ರದಲ್ಲೇ ದಿನಾಂಕಗಳನ್ನು ಪ್ರಕಟಿಸುತ್ತೇವೆ ಎಂದು ಹೇಳಿದ ಅವರು, ವಿಧಾನಮಂಡಲದ ಅಧಿವೇಶನ ಆರಂಭವಾಗುವ ಮುನ್ನವೇ ಈ ಪಾದಯಾತ್ರೆ ನಡೆಯಲಿದೆ ಎಂದು ತಿಳಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !