ಹೊಸದಿಗಂತ ಡಿಜಿಟಲ್ ಡೆಸ್ಕ್, ಬೆಂಗಳೂರು:
ರಾಜ್ಯದಲ್ಲಿ ಬಿಬಿಎಂಪಿ, ಜಿಪಂ- ತಾಪಂ ಸೇರಿದಂತೆ ಯಾವುದೇ ಚುನಾವಣೆ ಎದುರಿಸಲು ಪಕ್ಷವು ಸನ್ನದ್ದ ಸ್ಥಿತಿಯಲ್ಲಿದೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಶ್ರೀ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಪಕ್ಷವು ಬೆಂಗಳೂರಿನಲ್ಲಿ ಗರಿಷ್ಠ ಶಾಸಕರು ಹಾಗೂ ಸಂಸದರನ್ನು ಹೊಂದಿದೆ. ಅಲ್ಲದೆ ಸಂಘಟನೆ ವಿಚಾರದಲ್ಲಿಯೂ ಪಕ್ಷವು ಅತ್ಯಂತ ಬಲಿಷ್ಠವಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಕುರಿತು ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪನ್ನು ಸ್ವಾಗತಿಸುವೆ ಎಂದರು.
ಸರ್ವೋಚ್ಛ ನ್ಯಾಯಾಲಯದ ನಿರ್ದೇಶನಗಳನ್ನು ಪಾಲಿಸಿಕೊಂಡು ಚುನಾವಣೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ್ ಎಸ್. ಬೊಮ್ಮಾಯಿ ಹೇಳಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಭಿವೃದ್ಧಿ ಯೋಜನೆಗಳು ಮತ್ತು ಜನೋಪಯೋಗಿ ಕಾರ್ಯಗಳನ್ನು ಜನರ ಗಮನಕ್ಕೆ ತರುವ ಮೂಲಕ ಪಕ್ಷವು ರಾಜ್ಯದಲ್ಲಿ ಗರಿಷ್ಠ ಸ್ಥಾನಗಳನ್ನು ಗೆಲ್ಲಲಿದೆ. ಬಿಬಿಎಂಪಿ ಚುನಾವಣೆಯಲ್ಲೂ ಜಯಭೇರಿ ಭಾರಿಸಲಿದೆ ಎಂದು ಕಟೀಲ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ