ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕಾವೇರಿ ವಿವಾದ ಭುಗಿಲೆದ್ದಿದ್ದು, ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಪ್ರತಿಭಟನೆ ನಡೆಸುತ್ತಿದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಬಿ ಎಸ್ ಯಡಿಯೂರಪ್ಪ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಗೋವಿಂದ ಕಾರಜೋಳ, ಕಾಗೇರಿ ಸೇರಿದಂತೆ ಪ್ರಮುಖರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರತಿಭಟನೆ ಭುಗಿಲೆದ್ದಿದೆ. ರಾಜ್ಯ ಸರ್ಕಾರದ ಲೀಗಲ್ ಟೀಂ ಸೂಕ್ತ ರೀತಿಯಲ್ಲಿ ವಾದ ಮಂಡಿಸುವಲ್ಲಿ ವಿಫಲವಾಗಿದೆ, ನಮ್ಮ ರಾಜ್ಯದ ರೈತರಿಗೆ ಅನ್ಯಾಯವಾಗಿದೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ,
ಖಾಲಿ ಕೊಡ ಹಾಗೂ ಭಿತ್ತಿ ಪತ್ರಗಳನ್ನಿ ಹಿಡಿದುಕೊಂಡು ಪ್ರತಿಭಟನೆ ನಡೆಸಿದ್ದು, ಪೊಲೀಸರು ಪ್ರಮುಖರನ್ನು ವಶಕ್ಕೆ ಪಡೆದಿದ್ದಾರೆ.