ನಾಳೆ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ಪ್ರತಿಭಟನೆ: ಪಿ. ರಾಜೀವ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದು 9 ತಿಂಗಳು ಕಳೆದಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮಂಜೂರಾದ 11,144 ಕೋಟಿ ಅನುದಾನವನ್ನು ಬೇರೆ ಕಡೆ ವರ್ಗಾಯಿಸಿ ದುರ್ಬಳಕೆ ಮಾಡಿಕೊಂಡಿರುವುದನ್ನು ಖಂಡಿಸಿ ಫೆ. 23ರಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರ ಕರೆಯನ್ವಯ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಯಲಿದೆ ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಶಾಸಕ ಪಿ.ರಾಜೀವ್ ತಿಳಿಸಿದ್ದಾರೆ.

ಎಸ್‍ಇಎಸ್‍ಪಿ. ಎಸ್‍ಟಿಪಿ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸಿಕೊಳ್ಳುವ ಮೂಲಕ ಈ ಸರಕಾರ ದಲಿತರಿಗೆ ನಿರಂತರ ಅನ್ಯಾಯ ಮಾಡುತ್ತಾ ಬಂದಿದೆ. ಈ ಹಣವನ್ನು ಗ್ಯಾರಂಟಿಗಳಿಗೆ ಮತ್ತು ಬೇರೆ ಬೇರೆ ಉದ್ದೇಶಕ್ಕೆ ಬಳಸಿಕೊಂಡಿದ್ದನ್ನು ಖಂಡಿಸಿ ಈ ಪ್ರತಿಭಟನೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ದಲಿತರಿಗೆ ಈ ಹಿಂದೆ ಬಿಜೆಪಿ ಸರಕಾರ ಜಾರಿಗೊಳಿಸಿದ್ದ 75 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ಯೋಜನೆ ರದ್ದು ಮಾಡಲಾಗಿದೆ. ಇದು ಖಂಡನೀಯ. ಎಸ್‍ಸಿ, ಎಸ್‍ಟಿ ಸಮುದಾಯದ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ಥಗಿತವಾಗಿವೆ. ಇದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!