ವಿದ್ಯುತ್ ಶುಲ್ಕ ಹೆಚ್ಚಿಸಿದ ಕಾಂಗ್ರೆಸ್ ಸಕಾ೯ರದ ವಿರುದ್ಧ ಬಿಜೆಪಿ ಪ್ರತಿಭಟನೆ

ಹೊಸದಿಗಂತ ವರದಿ, ಕಲಬುರಗಿ:

ಕಾಂಗ್ರೆಸ್ ಸರ್ಕಾರ ದಿಢೀರನೆ ವಿದ್ಯುತ್ ಶುಲ್ಕವನ್ನು ಹೆಚ್ಚಿಸಿದ ಕ್ರಮವನ್ನು ವಿರೋದಿಸಿ ಬಿಜೆಪಿ ವತಿಯಿಂದ ಮಂಗಳವಾರ ಸಂಜೆ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು.

ಬಿಜೆಪಿ ನಗರ ಹಾಗೂ ಗ್ರಾಮಾಂತರ ಜಿಲ್ಲಾ ವತಿಯಿಂದ ನಗರದ ಸದಾ೯ರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಜಮಾಯಿಸಿ, ಕಾಲ್ನಡಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಜ್ಯ ಸಕಾ೯ರದ ವಿರುದ್ಧ ಘೋಷಣೆ ಕೂಗಿ,ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಲಾಯಿತು.

ಈ ಸಂದರ್ಭದಲ್ಲಿ ನಗರ ಜಿಲ್ಲಾಧ್ಯಕ್ಷ ಸಿದ್ದಾಜಿ ಪಾಟೀಲ್,ಗ್ರಾಮಾಂತರ ಜಿಲ್ಲೆಯ ಬಿಜೆಪಿ ಅಧ್ಯಕ್ಷರಾದ ಶಿವರಾಜ ಪಾಟೀಲ ರದ್ದೇವಾಡಗಿ,ಧಮ೯ಣ್ಣಾ ಇಟಗಾ,ಶರಣಪ್ಪಾ ತಳವಾರ, ಅಶೋಕ್ ಬಗಲಿ,ಮಹೇಶ್ ಚವಾಣ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!