ಹೊಸದಿಗಂತ ವರದಿ,ರಾಮನಗರ :
ಸದನದಲ್ಲಿ ಜನಸಾಮಾನ್ಯರ ಅಭಿವೃದ್ಧಿ ಕಾರ್ಯ ಮಾಡಲು ಸಲಹೆ ಸೂಚನೆ ನೀಡಬೇಕಾದ ವಿರೋಧ ಪಕ್ಷ ಇಲ್ಲಸಲ್ಲದ ಕಾರಣಗಳಿಂದ ಕಲಾಪ ಹಾಳು ಮಾಡುತ್ತಿದೆ. ಇದನ್ನು ವಿರೋಧಿಸಿ ಬಿಜೆಪಿ ವತಿಯಿಂದ ರಾಜದ್ಯಾಂತ ಫೆ. 27 ಮತ್ತು 28 ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ ಹೇಳಿದರು.
ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷವಾದ ಕಾಂಗ್ರೆಸ್ ಜನ ವಿರೋಧಿ ನೀತಿ ಅನುಸರಿಸುತ್ತಿದೆ. ಕ್ಷುಲಕ ಕಾರಣಕ್ಕೆ ಅಹೋರಾತ್ರಿ ಧರಣಿ ಸತ್ಯಾಗ್ರಹ ಮಾಡಿ ಜನರ ಹಾದಿ ತಪ್ಪಿಸುತ್ತಿದೆ.
ನಗರದ ನಕ್ಸಲ್, ಭಯೋತ್ಪಾದಕರ, ಉಗ್ರವಾದಿಗಳ ಪರವಿರುವ ಕಾಂಗ್ರೆಸ್ ನಡೆ ಖಂಡಿಸಿ ಪ್ರತಿಭಟನೆ ಆಯೋಜಿಸಲಾಗಿದೆ ಎಂದರು.
ಎಸ್.ಡಿ.ಪಿ.ಐ. ಮತ್ತು ಪಿಎಫ್ ಐ ಸಂಘಟನೆಗಳನ್ನು ನಿಷೇಧಿಸವಂತೆ ಸಿಎಂ ಅವರಿಗೆ ಈಗಾಗಲೇ ಒತ್ತಾಯಿಸಿದ್ದೇವೆ. ಸದ್ಯದಲ್ಲೇ ಸಿಎಂ ಅವರು ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರುದ್ರದೇವರು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸುರೇಶ್. ನಗರ ಘಟಕದ ಅಧ್ಯಕ್ಷ ಪಿ ಶಿವಾನಂದ್. ಮುಂತಾದವರು ಉಪಸ್ಥಿತರಿದ್ದರು