ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಕ್ಕೆ ಅನ್ಯಾಯವಾಗಿದೆ ಎಂಬ ರಾಜ್ಯ ಸರ್ಕಾರದ ಆರೋಪ ದೂರು ಹಾಗೂ ದೆಹಲಿಯಲ್ಲಿ ಬುಧವಾರ ಆಯೋಜಿಸಿದ್ದ ಬೃಹತ್ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ, ರಾಜ್ಯದಲ್ಲಿ ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಅಭಿವೃದ್ಧಿ ಯೋಜನೆಗಳ ಪಟ್ಟಿ ಬಿಡುಗಡೆ ಮಾಡಿದೆ.
ಕೇಂದ್ರ ಸರ್ಕಾರ ಕಳೆದ ದಶಕದಲ್ಲಿ ರಾಜ್ಯಕ್ಕೆ ಯಾವ್ಯಾವ ಯೋಜನೆ, ಅನುದಾನ ನೀಡಿದೆ ಎಂಬ ಮಾಹಿತಿಯನ್ನು ರಾಜ್ಯ ಬಿಜೆಪಿ ಬಿಡುಗಡೆ ಮಾಡಿದೆ.
“ಕರ್ನಾಟಕ ಅಭಿವೃದ್ಧಿಗೆ ಮೋದಿ ಗ್ಯಾರಂಟಿ ” ಎಂಬ ಬ್ಯಾನರ್ ಅಡಿಯಲ್ಲಿ ಬಿಜೆಪಿಯು 2004 ರಿಂದ 2014 ರ ಯುಪಿಎ ಅವಧಿಯಲ್ಲಿ ಹಂಚಿಕೆಯಾದ ಹಣವನ್ನು 2014 ರಿಂದ 2024 ರವರೆಗೆ ಎನ್ಡಿಎ ಅವಧಿಯಲ್ಲಿ ರಾಜ್ಯಕ್ಕೆ ಹಂಚಿಕೆ ಮಾಡಿದ ಹಣವನ್ನು ಹೋಲಿಸಿ ದಾಖಲೆಯನ್ನು ಬಿಡುಗಡೆ ಮಾಡಿದೆ.