ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಘೋಷಿಸಿದಂತ ಗ್ಯಾರಂಟಿ ಜಾರಿಗಾಗಿ ಕಸರತ್ತು ನಡೆಸುತ್ತಿದ್ದು , ಯೋಜನೆಯ ಜಾರಿಗಾಗಿ ಸಂಪನ್ಮೂಲ ಕ್ರೂಢೀಕರಣಕ್ಕೂ ಮುಂದಾಗಿದೆ. ಈ ಹಿನ್ನಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತೆರಿಗೆ ಹೆಚ್ಚಳ ಮಾಡಲು ಮುಂದಾಗುತ್ತಿದೆ ಎನ್ನಲಾಗುತ್ತಿದೆ. ಒಂದು ವೇಳೆ ಹೀಗೆ ಮಾಡಿದರೆ ಇದೇನಾದರೂ ಜಾರಿಯಾದ್ದೆ ಆದಲ್ಲಿ ರಾಜ್ಯಾದ್ಯಂತ ನಮ್ಮ ಕಾರ್ಯಕರ್ತರೊಂದಿಗೆ ಬೀದಿಗಿಳಿದು ಪ್ರತಿಭಟಿಸಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವಂತ ಅವರು, ತಮ್ಮ ಗ್ಯಾರಂಟಿಗಳ ಅನುಷ್ಠಾನಕ್ಕೆ ತಲೆದೋರಿರುವ ಹಣಕಾಸಿನ ಸಮಸ್ಯೆ ಸರಿದೂಗಿಸಲು ಕಾಂಗ್ರೆಸ್ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಹೆಚ್ಚಳಕ್ಕೆ ಮುಂದಾಗಲಿದೆಯೆಂದು ಕೇಳಿಬಂದಿದೆ. ಇದೇನಾದರೂ ಜಾರಿಯಾದ್ದೆ ಆದಲ್ಲಿ ರಾಜ್ಯಾದ್ಯಂತ ನಮ್ಮ ಬಿಜೆಪಿ ಕಾರ್ಯಕರ್ತರೊಂದಿಗೆ ಬೀದಿಗಿಳಿದು ಪ್ರತಿಭಟಿಸಲಿದ್ದೇವೆ ಎಂದು ಎಚ್ಚರಿಸಿದ್ದಾರೆ.