ಗುರುಲಿಂಗಸ್ವಾಮಿ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಸಂತಾಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೊಳಿಮಠ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ತೀವ್ರ ಸಂತಾಪ‌ ವ್ಯಕ್ತಪಡಿಸಿದ್ದಾರೆ.

ಸದಾ ಕ್ರಿಯಾಶೀಲ ಪ್ರವೃತ್ತಿಯವರಾದ ಗುರುಲಿಂಗಸ್ವಾಮಿ, ಬಸವರಾಜ ಬೊಮ್ಮಾಯಿಯವರು ಗೃಹ ಸಚಿವರಾದಾಗಿಂದ ಅವರ ಮಾಧ್ಯಮ ವಿಭಾಗವನ್ನು ನಿರ್ವಹಿಸುತ್ತಿದ್ದ ರೀತಿ ಮಾದರಿಯಾಗಿದೆ. ಅವರ ಅಕಾಲಿಕ ಅಗಲಿಕೆ ಆಘಾತ ತಂದಿದೆ ಎಂದಿರುವ ನಳಿನ್,
ಅವರ ಕುಟುಂಬದವರು, ಬಂಧುಮಿತ್ರರು ಮತ್ತು ಅಭಿಮಾನಿಗಳಿಗೆ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಪರಮಾತ್ಮನು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!