ಕುರುಡುಮಲೆಯಿಂದಲೇ ಬಿಜೆಪಿ ರಾಜ್ಯ ಪ್ರವಾಸ: ಗಣಪನ ದರುಶನ ಪಡೆದ ಬಿಎಸ್‌ವೈ, ಕಟೀಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ, ರೈತರ ಆತ್ಮಹತ್ಯೆ ಮತ್ತು ಬರ ಪರಿಸ್ಥಿತಿ ಅಧ್ಯಯನ ಕುರಿತು ಬಿಜೆಪಿ ರಾಜ್ಯವ್ಯಾಪಿ ಪ್ರವಾಸವನ್ನು ಕೈಗೊಂಡಿದೆ. ಇದಕ್ಕೂ ಮುನ್ನ ನಿನ್ನೆ ಮುಳಬಾಗಿಲಿನ ಕುರುಡುಮಲೆ ಮಹಾಗಣಪತಿ ದೇವಸ್ಥಾನದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.

ಬಳಿಕ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕುರುಡುಮಲೆಯಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ನಳಿನ್‌ ಕುಮಾರ್‌ ಕಟೀಲ್‌ ಮಾತನಾಡಿ..ರಾಜ್ಯದಲ್ಲಿ ರೈತ ವಿರೋಧಿ ಸರಕಾರ ಇದೆ ಎಂದು ಆಕ್ರೋಶ ಹೊರಹಾಕಿದರು. ಹಾಗಾಗಿಯೇ ಕಾಂಗ್ರೆಸ್ ಸರ್ಕಾರದ ವಿರುದ್ದ ನಮ್ಮ ಹೋರಾಟ ಕುರುಡು ಮಲೆಯಿಂದಲೇ ಶುರುವಾಗಿದೆ ಎಂದು ತಿಳಿಸಿದರು.

Image

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್ ಯಡಿಯೂರಪ್ಪ, ಶ್ರೀ ಡಿ.ವಿ ಸದಾನಂದ ಗೌಡ, ಸಂಸದರಾದ ಶ್ರೀ ಮುನಿಸ್ವಾಮಿ, ಶ್ರೀ ಗೋವಿಂದ ಕಾರಜೋಳ, ಶ್ರೀ ಈಶ್ವರಪ್ಪ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Image

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!