ಹೊಸದಿಗಂತ ಡಿಜಿಟಲ್ ಡೆಸ್ಕ್:
ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಸದಸ್ಯ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಇಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಲಿದ್ದಾರೆ.
11 ಗಂಟೆ ವೇಳೆಗೆ ಮಂಗಳೂರು ವಿಮಾನ ನಿಲ್ದಾಣ ತಲುಪಲಿರುವ ವಿಜಯೇಂದ್ರ ಮಧ್ಯಾಹ್ನದ ವೇಳೆಗೆ ಬೆಳ್ಳಾರೆ, ನೆಟ್ಟಾರು ತಲುಪಿ ಮೃತ ಪ್ರವೀಣ್ ನಿವಾಸಕ್ಕೆ ತೆರಳಿ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ.