ನಾಳೆ ಬಿಜೆಪಿ ಚಿಂತನ ಸಭೆ: ಸಿಎಂ ಬಸವರಾಜ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನಾಳೆ ನಡೆಯುವ ಚಿಂತನ ಸಭೆಯ ಕುರಿತು ಇಂದು ಚರ್ಚಿಸಲಾಗಿದೆ. ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಪಕ್ಷದ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರ ಉಪಸ್ಥಿತಿಯಲ್ಲಿ ಈ ಚರ್ಚೆ ನಡೆದಿದೆಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾತನಾಡಿದ ಅವರು, ನಾಳೆ ಬೆಳಿಗ್ಗೆ 9 ಗಂಟೆಗೆ ಚಿಂತನ ಸಭೆ ಪ್ರಾರಂಭವಾಗಲಿದೆ. ಸಂಘಟನೆ ವಿಚಾರ, ಪಕ್ಷವನ್ನು ಇನ್ನಷ್ಟು ಬಲಪಡಿಸುವುದು, ಮುಂಬರುವ ಚುನಾವಣೆ ಎದುರಿಸುವ ಕುರಿತು ನಾಳೆ ಚರ್ಚಿಸಿ ಅಗತ್ಯ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುವುದು . ಮುಕ್ತವಾಗಿ ಚಿಂತನೆಗೆ ನಾವು ಅವಕಾಶ ಮಾಡಿಕೊಟ್ಟಿದ್ದೇವೆ ಎಂದು ವಿವರಿಸಿದರು.
ಪಕ್ಷದ ರಾಜ್ಯ ಕೋರ್ ಕಮಿಟಿ ಸದಸ್ಯರು, ಸಚಿವ ಸಂಪುಟದ ಎಲ್ಲ ಸದಸ್ಯರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. 50ಕ್ಕೂ ಹೆಚ್ಚು ಜನ ರಾಜ್ಯ ಪ್ರಮುಖರೂ ಭಾಗವಹಿಸುವ ಸಭೆ ಇದಾಗಿದೆ.
ಈ ಸಂದರ್ಭದಲ್ಲಿ ಅರುಣ್ ಸಿಂಗ್, ನಳಿನ್‍ಕುಮಾರ್ ಕಟೀಲ್ ಮತ್ತು ಇತರ ಮುಖಂಡರು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!