ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಬಿಜೆಪಿ ತನ್ನೆಲ್ಲಾ ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡಿದೆ. ಆದರೆ ಶಿವಮೊಗ್ಗಕ್ಕೆ ಅಭ್ಯರ್ಥಿ ಯಾರು ಎನ್ನೋದು ಯಾರಿಗೂ ಗೊತ್ತಿಲ್ಲದ ವಿಚಾರವಾಗಿದೆ.
ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಸೊಸೆಗೆ ಬಿಜೆಪಿ ಟಿಕೆಟ್ ಸಾಧ್ಯತೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಮಗ ಅಥವಾ ಸೊಸೆ ಯಾರಿಗಾದರೂ ಟಿಕೆಟ್ ಕೊಡಿಸಲು ಈಶ್ವರಪ್ಪ ಪ್ಲ್ಯಾನ್ ಮಾಡಿದ್ದು, ಕಾಂತೇಶ್ ಅಥವಾ ಶಾಲಿನಿ ಕಾಂತೇಶ್ಗೆ ಬಿಜೆಪಿ ಟಿಕೆಟ್ ಎನ್ನಲಾಗಿದೆ.
ಇನ್ನೇನು ಟಿಕೆಟ್ ಕೈ ತಪ್ಪುವ ಸೂಚನೆ ಸಿಗುತ್ತಿದ್ದಂತೆಯೇ ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದರು. ತನ್ನಿಷ್ಟದಿಂದಲೇ ನಿವೃತ್ತಿ ಘೋಷಿಸಿದ್ದೇನೆ ಎಂದು ಹೇಳಿದ್ದರು. ಮಗನಿಗೆ ಟಿಕೆಟ್ ಕೊಡಿಸ್ತಿದ್ದೀರಾ ಎಂದಾಗ ಎಲ್ಲವೂ ಹೈಕಮಾಂಡ್ಗೆ ಬಿಟ್ಟಿದ್ದು ಎಂದಷ್ಟೇ ಹೇಳಿದ್ದಾರೆ.