ಹೊಸದಿಗಂತ ಡಿಜಿಟಲ್ ಡೆಸ್ಕ್ :
ದಾವಣಗೆರೆಯ ಬಿಜೆಪಿ ವಿಜಯ ಸಂಕಲ್ಪ ಸಮಾರಂಭಕ್ಕೆ ಪ್ರಧಾನಿ ಮೋದಿ ಜನರ ಮಧ್ಯದಿಂದಲೇ ರೋಡ್ ಶೋ ಮೂಲಕ ಆಗಮಿಸಿದ್ದಾರೆ.
ತೆರೆದ ವಾಹನದ ಮೂಲಕ ಪ್ರಧಾನಿ ನರೇಂದ್ರ ಮೋದಿ ಜನರತ್ತ ಕೈಬೀಸುತ್ತಾ ವೇದಿಕೆಗೆ ಆಗಮಿಸಿದರು. ಈ ವೇಳೆ ಜನರು ಹೂವಿನ ಸುರಿಮಳೆಗೈದಿದಿದ್ದಾರೆ.
ಪ್ರಧಾನಿ ಮೋದಿ ತೆರೆದ ವಾಹನದ ಮೂಲಕ ಆಗಮಿಸಿದ ಪ್ರಧಾನಿ ಮೋದಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಾಥ್ ನೀಡಿದ್ದಾರೆ.