ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಅತಿ ಹೆಚ್ಚು ಸೀಟ್ ಗೆದ್ದು ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುತ್ತೆ. ಕೆಲವರಿಗೆ ವೋಟ್ ಮೊದಲು ಆದರೆ ನಮಗೆ ರಾಷ್ಟ್ರ ಮೊದಲು ಎಂದು ಬಿಜೆಪಿ ಶಾಸಕ ಸಿ.ಟಿ ರವಿ ಹೇಳಿದ್ದಾರೆ.
ದಾರವಾಡದಲ್ಲಿ ಮಾತನಾಡಿದ ಅವರು, ರಾಜ್ಯದ 140ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರದಲ್ಲಿ ರಥಯಾತ್ರೆ ಮಾಡಿದ್ದೇವೆ, ವಿಜಯಸಂಕಲ್ಪ ಯಾತ್ರೆಯಲ್ಲಿ ಅಭೂತಪೂರ್ವ ಜನಬೆಂಬಲ ಸಿಕ್ಕಿದೆ ಎಂದರು.
ನಾವು ಯಾವುದೇ ಜಾತಿ ತಾರತಮ್ಯ ಮಾಡದೆ ಯೋಜನೆ ತಲುಪಿಸಿದ್ದೇವೆ. . ಕಳಸಾ ಬಂಡೂರಿ ಯೋಜನೆಗೆ 1000 ಕೋಟಿ ತಗೆದಿಟ್ಟಿದ್ದೇವೆ. ಒಂದು ಕಾಲದಲ್ಲಿ ನಾವು ಕಳಸಾ ಬಂಡೂರಿಗಾಗಿ ಹೋರಾಟ ಮಾಡಿದ್ವಿ. ಅಧಿಕಾರಕ್ಕೆ ಬಂದ ಮೇಲೆ ನಮ್ಮ ಬದ್ದತೆ ತೋರಿಸಿ DPR ಗೆ ಅನುಮತಿ ತರುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದರು.