ಚಿಕ್ಕಮಗಳೂರಿನಲ್ಲಿ ಅಪ್ರಾಪ್ತ ವಯಸ್ಕ ಯುವತಿ ಆತ್ಮಹತ್ಯೆ- ಕಿರುಕುಳದ ಆರೋಪದ ಮೇಲೆ ಬಿಜೆಪಿ ಕಾರ್ಯಕರ್ತನ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಬಿಜೆಪಿ ಕಾರ್ಯಕರ್ತನ ಕಿರುಕುಳದಿಂದ ಅಪ್ರಾಪ್ತೆ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, 25 ವರ್ಷದ ಬಿಜೆಪಿ ಕಾರ್ಯಕರ್ತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಚಿಕ್ಕಮಗಳೂರಿನ ಬಿಜೆಪಿ ಕಾರ್ಯಕರ್ತ ಹಿತೇಶ್ (25) ಅಪ್ರಾಪ್ತ ಬಾಲಕಿ ದೀಪ್ತಿಯನ್ನ ಪ್ರೀತಿಸಿ ವಂಚಿಸಿದ್ದಾನೆ ಅಂತ ಆರೋಪಿಸಲಾಗಿದೆ. ಇದರಿಂದ ನೊಂದ ದೀಪ್ತಿ ಜ.10ರಂದು ಮನೆಯಲ್ಲಿದ್ದ ಕಳೆ ನಾಶಕ ಸೇವಿಸಿ ಆಹ್ಮಹತ್ಯೆಗೆ ಯತ್ನಿಸಿದ್ದಳು. ತಕ್ಷಣ ಅವಳನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ (ಜ.14)ರಂದು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಏ.ಜೆ.ಆಸ್ಪತ್ರೆಯಲ್ಲಿ ದೀಪ್ತಿ ಸಾವನ್ನಪ್ಪಿದ್ದಾಳೆ. ಸಾಯುವ ಮುನ್ನ ದೀಪ್ತಿ ಡೆತ್ ನೋಟ್ ಬರೆದಿಟ್ಟಿದ್ದು, ಇದೀಗ ಆರೋಪಿಯನ್ನು ಬಂಧಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!