ವಿದ್ಯುತ್ ದರ ಏರಿಕೆ ಖಂಡಿಸಿ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಹೊಸದಿಗಂತ ವರದಿ ವಿಜಯಪುರ:

ವಿದ್ಯುತ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ನಗರದ ಸಿದ್ಧೇಶ್ವರ ದೇವಸ್ಥಾನದ ಎದುರು ಸೇರಿದ ನಗರ ಬಿಜೆಪಿ ಮಂಡಳ ಪದಾಧಿಕಾರಿಗಳು, ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಜನತೆಗೆ ಸುಳ್ಳು ಗ್ಯಾರಂಟಿ ಭರವಸೆ ನೀಡಿ, ಸದ್ಯ ವಿದ್ಯುತ್ ದರ ಏರಿಕೆ ಮಾಡಿದ್ದಾರೆ ಎಂದು ಕೈಗೆ ಬೇಡಿ ಹಾಕಿಕೊಂಡು ವಿನೂತನವಾಗಿ ಪ್ರತಿಭಟಿಸಿ ಕಿಡಿಕಾರಿದರು.

ಕಾಂಗ್ರೆಸ್ ಸರ್ಕಾರ ಜನತೆಗೆ ಐದು ಗ್ಯಾರಂಟಿ ನೀಡಿ, ಷರತ್ತು ವಿಧಿಸಿ ಮೋಸ ಮಾಡುತ್ತಿದೆ. ಹೀಗಾಗಿ ತಕ್ಷಣವೇ ವಿದ್ಯುತ್ ದರ ಇಳಿಕೆ ಮಾಡಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಮುಖಂಡರಾದ ಸುರೇಶ ಬಿರಾದಾರ, ಉಮೇಶ ಕಾರಜೋಳ, ಪಾಲಿಕೆ ಸದಸ್ಯರಾದ ರಾಜಶೇಖರ ಮಗಿಮಠ, ಶಿವರುದ್ರ ಬಾಗಲಕೋಟ, ರಾಹುಲ್ ಜಾಧವ, ವಿಜಯ ಜೋಶಿ ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!