ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಗೆ ಸಂಸದ ಡಿ.ಕೆ.ಸುರೇಶ್ ಅಸಮಾಧಾನ ವ್ಯಕ್ತಪಡಿಸಿ ಸ್ವತಂತ್ರ ದೇಶದ ವಿಚಾರ ಪ್ರಸ್ತಾಪಿಸಿದ್ದರು. ಈ ಹೇಳಿಕೆ ವಿರುದ್ಧ ದಾವಣಗೆರೆ ಜಿಲ್ಲಾ ಬಿಜೆಪಿ ಯುವಮೋರ್ಚಾ ಘಟಕ ದೂರು ದಾಖಲಿಸಿದೆ.
ಡಿ.ಕೆ.ಸುರೇಶ್ ಅವರ ಮಾತು ದೇಶದ ಗೌರವಕ್ಕೆ, ಜನರ ಭಾವನೆಗಳಿಗೆ ಧಕ್ಕೆ ತಂದಿದೆ. ಇದು ಸಂವಿಧಾನ ವಿರೋಧಿ ಹೇಳಿಕೆ. ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ಘಟಕದಿಂದ ನಗರ ಡಿವೈಎಸ್ಪಿ ಮಲ್ಲೇಶ ದೊಡ್ಡಮನಿ ಮೂಲಕ ಎಸ್ಪಿಗೆ ಮನವಿ ಸಲ್ಲಿಸಿದರು. ಮಹಾನಗರ ಪಾಲಿಕೆ ಸದಸ್ಯ ಶಿವಪ್ರಕಾಶ್ ನೇತೃತ್ವದಲ್ಲಿ ದೂರು ದಾಖಲಾಗಿದೆ.