ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಥಣಿ ವಿಧಾನಸಭೆ ಕ್ಷೇತ್ರದ ಟಿಕೆಟ್ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಬಿಜೆಪಿಗೆ ರಾಜಿನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸವದಿ ಹೇಳಿದ್ದಾರೆ. ನನಗೆ ಅಥಣಿ ಟಿಕೆಟ್ ಸಿಗುವ ವಿಶ್ವಾಸ ಇತ್ತು ಆದರೆ ಕಡೇ ಕ್ಷಣದಲ್ಲಿ ಟಿಕೆಟ್ ಕೈ ತಪ್ಪಿದೆ. ಹಾಗಾಗಿ ಬಿಜೆಪಿಗೆ ರಾಜೀನಾಮೆ ಕೊಡಲು ನಿರ್ಧರಿಸಿದ್ದೇನೆ ಎಂದಿದ್ದಾರೆ.
ಮುಖ್ಯಮಂತ್ರಿಗಳು ನನ್ನ ಜೊತೆ ಸ್ನೇಹದಿಂದ ಇದ್ದಾರೆ. ಉತ್ತಮ ಬಾಂಧವ್ಯ ಹೊಂದಿದ್ದಾರೆ. ಆದರೆ ಜನರ ತೀರ್ಮಾನಕ್ಕೆ ಎಲ್ಲರೂ ತಲೆಬಾಗಬೇಕಿದೆ. ಕ್ಷೇತ್ರದ ಜನರೇ ನನ್ನ ಹೈ ಕಮಾಂಡ್ ಅವರನ್ನು ನಾನು ಕಳೆದುಕೊಳ್ಳುವುದಿಲ್ಲ. ಗಟ್ಟಿ ನಿರ್ಣಯ ತೆಗೆದುಕೊಳ್ಳುವ ಸಮಯ ಬಂದಿದೆ. ನಾಳೆ ನನ್ನ ಕ್ಷೇತ್ರದ ಜನತೆ ಜೊತೆಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇನೆ ಎಂದಿದ್ದಾರೆ. ಎಂದಿದ್ದಾರೆ.