ಬಿಜೆಪಿಯ ಮೂರನೇ ಪಟ್ಟಿ ರಿಲೀಸ್: ಕೊಯಮತ್ತೂರಿನಿಂದ ಅಣ್ಣಾಮಲೈ ಸ್ಪರ್ಧೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಲೋಕಸಭಾ ಚುನಾವಣೆಗೆ ಬಿಜೆಪಿಯ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು, ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಕೊಯಮತ್ತೂರಿನಿಂದ ಸ್ಪರ್ಧೆ ಮಾಡಲಿದ್ದಾರೆ.

ತಮಿಳುನಾಡಿನ 9 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್‌ ಮಾಡಲಾಗಿದೆ. ಚೆನೈ ದಕ್ಷಿಣದಿಂದ ಡಾ. ತಮಿಳ್ ಸಾಯಿ ಸೌಂದರ್ಯರಾಜನ್ ಗೆ ಟಿಕೆಟ್ ನೀಡಲಾಗಿದೆ. ತಮಿಳ್‌ ಸಾಯಿ ಸೌಂದರ್ಯರಾಜನ್‌, ಈ ಹಿಂದೆ ತೆಲಂಗಾಣದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು.

ಎಲ್ . ಮುರುಗನ್ ನೀಲಗಿರಿ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದರೆ. ಕನ್ಯಾಕುಮಾರಿಯಿಂದ ಪೊನ್ನು ರಾಧಾಕೃಷ್ಣನ್ ಸ್ಪರ್ಧೆ ಮಾಡಲಿದ್ದಾರೆ.

ತಮಿಳುನಾಡಿನಲ್ಲಿ ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ಏಪ್ರಿಲ್‌ 19 ರಂದು ನಡೆಯಲಿದೆ. ಇದರ ಬೆನ್ನಲ್ಲಿಯೇ ತಮಿಳುನಾಡಿನ 9 ಕ್ಷೇತ್ರಗಳಿಗೆ ಬಿಜೆಪಿ ಹೆಸರನ್ನು ಅಂತಿಮ ಮಾಡಿದೆ.

ತಮಿಳುನಾಡಿನ 39 ಲೋಕಸಭಾ ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ ಮಾಡಲಿದ್ದು, ಈಗ 9 ಹೆಸರನ್ನು ಘೋಷಣೆ ಮಾಡಿದೆ.

ತಮಿಳುನಾಡಿನ 9 ಕ್ಷೇತ್ರದ ಅಭ್ಯರ್ಥಿಗಳು
ಚೆನ್ನೈ ದಕ್ಷಿಣ- ತಮಿಳ್‌ಸಾಯಿ ಸೌಂದರ್ಯರಾಜನ್‌
ಚೆನ್ನೈ ಕೇಂದ್ರ – ವಿನೋಜ್ ಪಿ. ಸೆಲ್ವಂ
ವೆಲ್ಲೂರು- ಡಾ.ಎ.ಸಿ.‍ಷಣ್ಮುಗಂ
ಕೃಷ್ಣಗಿರಿ- ಸಿ. ನರಸಿಂಹನ್
ನೀಲಗಿರೀಸ್ (ಎಸ್‌ಸಿ)- ಡಾ. ಎಲ್. ಮುರುಗನ್
ಕೊಯಮತ್ತೂರು – ಕೆ. ಅಣ್ಣಾಮಲೈ
ಪೆರಂಬದೂರು- ಟಿ.ಆರ್. ಪಾರಿವೆಂದರ್
ತೂತುಕುಡಿ- ನೈನಾರ್ ನಾಗೇಂದ್ರನ್
ಕನ್ಯಾಕುಮಾರಿ- ರಾಧಾಕೃಷ್ಣನ್

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!