ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶದಲ್ಲಿ ನಡೆದ ಸಮಾವೇಶವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಭವಿಷ್ಯ ನುಡಿದಿರುವ ‘24 ಮೇ 400 ಪಾರ್’ ಸ್ಲೋಗನ್ನ 400 ಸ್ಥಾನಗಳ ಬಿಜೆಪಿ ಗೆಲುವಿಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಇದು ಕೇವಲ ಕನಸಷ್ಟೇ. ಬಿಜೆಪಿಗೆ 400 ಅಲ್ಲ, 100 ಸ್ಥಾನ ಗೆಲ್ಲಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಅಮೇಥಿಯಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಮಾತನಾಡಿದ ಅವರು, ಈ ಬಾರಿ ‘ಅಬ್ ಕಿ ಬಾರ್ ಸತ್ತಾ ಸೆ ಬಾಹರ್’ ಎಂದು ವ್ಯಂಗ್ಯವಾಡಿದ ಖರ್ಗೆ, ಅಮೇಥಿ, ರಾಯ್ಬರೇಲಿಯಲ್ಲಿ ಕಾಂಗ್ರೆಸ್ ಹಲವು ಬಾರಿ ಚುನಾವಣೆ ಗೆದಿದ್ದದ್ದರೂ ಬಿಜೆಪಿ ಜನರಲ್ಲಿ ದ್ವೇಷ ಬಿತ್ತಲು ಷಡ್ಯಂತ್ರ ನಡೆಸುತ್ತಿದೆ ಎಂದು ಆರೋಪಿಸಿದರು.
ಇದು ರಾಜೀವ್ ಗಾಂಧಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಶ್ರಮಿಸಿದ ನೆಲ. ಅಮೇಥಿಯ ಜನರು ಗಾಂಧಿ ಕುಟುಂಬದೊಂದಿಗೆ ಆಳವಾದ ಸಂಪರ್ಕವನ್ನು ಹೊಂದಿದ್ದಾರೆ ಎಂದು ಖರ್ಗೆ ಇದೇ ವೇಳೆ ಹೇಳಿದರು