ಬಿಜೆಪಿಯಿಂದ ದೇಶ ಹೊಡೆಯುವ ಕೆಲಸ: ಕೇಂದ್ರ ವಿರುದ್ಧ ರಾಹುಲ್ ವಾಗ್ದಾಳಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎರಡು ದಿನಗಳ ಭೇಟಿ ನೀಡಿದ್ದು, ಈ ವೇಳೆ ರಾಹುಲ್ ಗಾಂಧಿ ತಮ್ಮ ಇತ್ತೀಚಿನ ಮಣಿಪುರ ಭೇಟಿಯ ಬಗ್ಗೆ ಚರ್ಚಿಸಿದ್ದಾರೆ. ಬಿಜೆಪಿ ದೇಶ ಹೊಡೆಯುವ ಕೆಲಸ ಮಾಡುತ್ತಿದೆ ಎಂದು ಟೀಕಿಸಿದ್ದಾರೆ.

ವಯನಾಡ್’ನಲ್ಲಿ ಜನರನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಎಲ್ಲೆಡೆ ರಕ್ತವಿದೆ, ಎಲ್ಲೆಡೆ ಕೊಲೆ ಮತ್ತು ಎಲ್ಲೆಡೆ ಅತ್ಯಾಚಾರ ನಡೆಯುತ್ತಿದೆ. ಮಣಿಪುರದ ಪರಿಸ್ಥಿತಿ ಹೀಗಿದೆ, ಮತ್ತು ಪ್ರಧಾನಿಯವರು ಸಂಸತ್ತಿನಲ್ಲಿ 2 ಗಂಟೆ 13 ನಿಮಿಷಗಳ ಕಾಲ ಮಾತನಾಡಿದರು. ಆದ್ರೆ, ಮಣಿಪುರದ ಬಗ್ಗೆ ಕೇವಲ 2 ನಿಮಿಷಗಳ ಮಾತ್ರ ಮಾತನಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!