ಬಿಜೆಪಿ ಟಿಕೆಟ್​ ಕೈತಪ್ಪಲು ಬಿ.ಎಲ್​. ಸಂತೋಷ್​ ಕಾರಣ: ಜಗದೀಶ್​ ಶೆಟ್ಟರ್​ ಆರೋಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ನನಗೆ ಬಿಜೆಪಿ ಟಿಕೆಟ್​ ಕೈತಪ್ಪಲು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್​.ಸಂತೋಷ್​ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್​ ಶೆಟ್ಟರ್​ ಗಂಭೀರ ಆರೋಪ ಮಾಡಿದ್ಧಾರೆ.

ಮಂಗಳವಾರದಂದು ಹುಬ್ಬಳ್ಳಿಯಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿದ ಅವರು, ಹಲವಾರು ದಿನಗಳಿಂದ ನಾನು ನೋವನ್ನು ಅನುಭವಿಸಿದ್ದೇನೆ. ಇದಕ್ಕೆ ಕೇವಲ ಟಿಕೆಟ್‌ ವಿಚಾರವಷ್ಟೇ ಕಾರಣವಲ್ಲ. ಟಿಕೆಟ್‌ ಕೈತಪ್ಪೋಕೆ ಕಾರಣ ಅದವರ ಹೆಸರು ಹೇಳೋ ಸಮಯ ಈಗ ಬಂದಿದೆ. ಸಂತೋಷ್‌ ಅವರ ಷಡ್ಯಂತ್ರದಿಂದ ಪಕ್ಷಕ್ಕೆ ಹಾನಿಯಾಗಿದೆ. ಸಂತೋಷ್‌ ಜೊತೆಗೆ ಇನ್ನಷ್ಟು ಜನರ ಕೈವಾಡದಿಂದ ಟಿಕೆಟ್‌ ಕೈತಪ್ಪಿದೆ” ಎಂದು ಆರೋಪಿಸಿದರು.

ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ, ದಿವಂಗತ ಮಾಜಿ ಸಂಸದ ಅನಂತ ಕುಮಾರ್ ನೇತೃತ್ವದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ ಕಟ್ಟಿದ್ದೇನೆ ಎಂದು ಇದೇ ವೇಳೆ ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ತಮ್ಮ ಹಳೆ ದಿನಗಳನ್ನು ಮೆಲಕು ಹಾಕಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!