ಹೊಸದಿಗಂತ ವರದಿ ಬೆಳಗಾವಿ:
ಮಹಾನಗರ ಪಾಲಿಕೆಯ ಆಡಳಿತ ಪಕ್ಷದ ಬಿಜೆಪಿ ಸದಸ್ಯರು ಸಾಮಾನ್ಯ ಸಭೆಗೂ ಮುನ್ನ ಬುಧವಾರ ಬೆಳಗ್ಗೆ ಪಾಲಿಕೆ ಎದುರಿನ ಅಂಬೇಡ್ಕರ್ ಪುತ್ಥಳಿ ಬಳಿ ಪ್ರತಿಭಟನೆ ನಡೆಸಿದರು.
ಬಿಜೆಪಿ ಸದಸ್ಯ ಅಭಿಜಿತ್ ಜವಳೇಕರ ಅವರ ಮೇಲಿನ ಹಲ್ಲೆ ಹಾಗೂ ಅವರ ಬಂಧನ ಖಂಡಿಸಿ ಪ್ರತಿಭಟನೆ ನಡೆಸಿದ ಸದಸ್ಯರು, ಘಟನೆ ಹಿನ್ನೆಲೆಯಲ್ಲಿ ಕಳವಳ ವ್ಯಕ್ತಪಡಿಸಿದರು.
ನಾವು ಚುನಾಯಿತ ಪ್ರತಿನಿಧಿಗಳು ನಾವು ನಮ್ಮ ವಾರ್ಡ್ ಗಳಲ್ಲಿ ಸಂಚರಿಸುವುದು ದುಸ್ತರ ವಾಗಿದೆ. ಭಯದ ವಾತಾವರಣ ನಿರ್ಮಾಣವಾಗಿದೆ ಎಂದರು.
ಮಹಾನಗರ ಪಾಲಿಕೆಯ ಸದಸ್ಯರು ಕೆಲಸ ಮಾಡಲು ಭೀತಿ ಎದುರಾಗಿದೆ. ಆದ್ದರಿಂದ ನಮಗೆ ರಕ್ಷಣೆ ಕೊಡಬೇಕೆಂದು ಒತ್ತಾಯಪಡಿಸಿದರು.