ಕೃಷಿ ಹೊಂಡದಲ್ಲಿ ಬ್ಲಾಸ್ಟ್‌: ಡ್ರೋನ್‌ ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೃಷಿ ಹೊಂಡಕ್ಕೆ ಸೋಡಿಯಂ ಎಸೆದು ಸ್ಫೋಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್‌ಗೆ ಡಿಸೆಂಬರ್‌ 26ರವರೆಗೂ ನ್ಯಾಯಾಂಗ ಬಂಧನ ಮಧುಗಿರಿಯ ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ.

ಅನುಮತಿ ಇಲ್ಲದೇ ಸ್ಫೋಟಗೊಳಿಸಿದ್ದಕ್ಕೆ ಡ್ರೋನ್​ ಪ್ರತಾಪ್​ನನ್ನು ಮಿಡಿಗೇಶಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಸೋಮವಾರ (ಡಿ.16) ನ್ಯಾಯಾಲಯದ ಮುಂದೆ ಹಾಜಪಡಿಸಿದರು.

ತುಮಕೂರು ‌ಜಿಲ್ಲೆಯ ಮಧುಗಿರಿ ತಾಲೂಕಿನ ಜನಕಲೋಟಿ ಬಳಿ ಕೃಷಿ ಹೊಂಡಕ್ಕೆ ಸೋಡಿಯಂ ಎಸೆದು ಸ್ಫೋಟಿಸಿದ್ದಾರೆ ಎಂಬ ಆರೋಪದ ಮೇಲೆ ಡ್ರೋನ್​ ಪ್ರತಾಪ್​ರನ್ನು ಡಿಸೆಂಬರ್​ 12 ಮಿಡಿಗೇಶಿ ಪೊಲೀಸರು ಬಂಧಿಸಿದ್ದರು. ಬಳಿಕ, ಪೊಲೀಸರು ಡ್ರೋನ್​ ಪ್ರತಾಪ್​ನನ್ನು ಡಿಸೆಂಬರ್​ 13ರಂದು ‌ಮಧುಗಿರಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಪೊಲೀಸರ ಮನವಿ ಮೇರೆಗೆ ನ್ಯಾಯಾಲಯ ಡ್ರೋನ್​ ಪ್ರತಾಪ್​ ಅವರನ್ನು ಪೊಲೀಸ್​ ಕಸ್ಟಡಿಗೆ ನೀಡಿದ್ದರು.

ಇಂದು ಪೊಲೀಸ್​ ಕಸ್ಟಡಿ ಅಂತ್ಯವಾಗಿದ್ದು, ಪೊಲೀಸರು ಡ್ರೋನ್​ ಪ್ರತಾಪ್​ ಅವರನ್ನು ನಾಯ್ಯಾಲಯದ ಮುಂದೆ ಹಾಜರುಪಡಿಸಿದರು. ನ್ಯಾಯಾಲಯ ಡ್ರೋನ್​ ಪ್ರತಾಪ್​ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!