ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಕಸ್ಮಿಕವಾಗಿ ಗ್ರೆನೇಡ್ ಸ್ಪೋಟಗೊಂಡು ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಇಬ್ಬರು ಯೋಧರು ಸಾವನ್ನಪ್ಪಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.
ಕ್ಯಾಪ್ಟನ್ ಆನಂದ್, ಭಗವಾನ್ ಸಿಂಗ್ ಹುತಾತ್ಮ ಯೋಧರು ಎಂದು ಸೇನಾ ಮೂಲಗಳು ಸೋಮವಾರ ತಿಳಿಸಿವೆ. ಜಮ್ಮು ಕಾಶ್ಮೀರದ ಮೆಂಧಾರ್ ಸೆಕ್ಟರ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭ ಈ ಅವಘಡ ಸಂಭವಿಸಿದೆ.
ಗಾಯಾಳುಗಳನ್ನು ತಕ್ಷಣವೇ ಹೆಲಿಕಾಪ್ಟರ್ ಮೂಲಕ ಚಿಕಿತ್ಸೆಗಾಗಿ ಉಧಮ್ಪುರಕ್ಕೆ ಕರೆದೊಯ್ಯಲಾಯಿತಾದರೂ ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ.