ಸ್ಫೋಟವು ಹೇಡಿತನದ ಕೃತ್ಯ: ರಾಮೇಶ್ವರಂ ಕೆಫೆಗೆ ಭೇಟಿ ನೀಡಿದ ಅಸಾದುದ್ದೀನ್ ಒವೈಸಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹೈದರಾಬಾದ್ ರಾಮೇಶ್ವರಂ ಕೆಫೆಗೆ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಅಧ್ಯಕ್ಷ ಅಸಾದುದ್ದೀನ್ ಒವೈಸಿ ಭೇಟಿ ನೀಡಿದರು.

ಬೆಂಗಳೂರಿನ ರಾಮೇಶ್ವರಂ ಸ್ಫೋಟವನ್ನು ಖಂಡಿಸಿದ ಅಸಾದುದ್ದೀನ್ ಒವೈಸಿ, ಸ್ಫೋಟವು ಹೇಡಿತನದ ಕೃತ್ಯ ಮತ್ತು ಭಾರತದ ಮೌಲ್ಯಗಳ ಮೇಲಿನ ದಾಳಿ ಎಂದು ಹೇಳಿದರು.

ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮಸ್ಥಳವಾದ ರಾಮೇಶ್ವರಂ ಹೆಸರನ್ನು ಕೆಫೆಗೆ ಇಡಲಾಗಿದೆ . ಹೈದರಾಬಾದ್ನಲ್ಲಿ ಇತ್ತೀಚೆಗಷ್ಟೇ ಆರಂಭವಾಗಿರುವ ರಾಮೇಶ್ವರಂ ಕೆಫೆ ಹೋಟೆಲ್ಗೆ ಭೇಟಿ ನೀಡಿ ಬಂದ ನಂತರ ಒವೈಸಿ ಈ ಟ್ವೀಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!