ಬಲಿಷ್ಠ ಭಾರತ ನಿರ್ಮಾಣಕ್ಕೆ ಬಿಜೆಪಿಗೆ ಆಶೀರ್ವದಿಸಿ : ಶಾಸಕ ಕೆ.ಜಿ.ಬೋಪಯ್ಯ

ಹೊಸದಿಗಂತ ವರದಿ ಮಡಿಕೇರಿ:

ದೇಶ ಇಂದು ಪ್ರಗತಿಯಲ್ಲಿ ಪ್ರಪಂಚದಲ್ಲಿಯೇ 5ನೇ ಸ್ಥಾನದಲ್ಲಿದೆ. ಮೊದಲ ಸ್ಥಾನದಲ್ಲಿ ಭಾರತ ನಿಲ್ಲಲು ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಬೇಕು ಎಂದು ಶಾಸಕ ಹಾಗೂ ರಾಜ್ಯ ಸರ್ಕಾರಿ ಜಮೀನು ಸಂರಕ್ಷಣಾ ಸಮಿತಿ ಅಧ್ಯಕ್ಷ ಕೆ.ಜಿ ಬೋಪಯ್ಯ ಹೇಳಿದರು.

ವೀರಾಜಪೇಟೆ ಸಮೀಪದ ಬಿ.ಶೆಟ್ಟಿಗೇರಿ ಗ್ರಾ.ಪಂ ವ್ಯಾಪ್ತಿಯ ಕೊಂಗಣ ಒಡಿಬೈಲು ಕಾಲೋನಿಯಲ್ಲಿ ಕಾವೇರಿ ನಿರಾವರಿ ನಿಗಮದ ರೂ.68 ಲಕ್ಷ ಅನುದಾನದಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಮೂಲ ಸೌಲಭ್ಯಗಳ ಅಭಿವೃದ್ಧಿಗೆ ಯೋಜನೆಗಳನ್ನು ಜಾರಿಗೊಳಿಸಿ ಸರಕಾರ ಸಮರ್ಪಕವಾಗಿ ನಿರ್ವಹಿಸಿದೆ.ಬಿಜೆಪಿ ಸರ್ಕಾರ ಜನರ ಬೇಡಿಕೆಗೆ ಭಾವನತ್ಮಕಾವಾಗಿ ಸ್ಪಂದಿಸುತ್ತಿದೆ.ರಾಜ್ಯ ಪ್ರಗತಿಯೆಡೆಗೆ ಸಾಗುತ್ತಿದೆ. ಬಲಿಷ್ಠ ಭಾರತ ನಿರ್ಮಾಣಕ್ಕೆ ಜನತೆ ಬಿಜೆಪಿಗೆ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹಾಜರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!