ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೆ ಶಂಖ ಊದಿ: ಮಹಿಳೆಯರಿಗೆ ಕರೆ ನೀಡಿದ ಬಿಜೆಪಿ ನಾಯಕ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಬಂಗಾಳದ ಬಶೀರ್‌ಹಾಟ್‌ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಸಂದೇಶ್‌ಖಾಲಿ ಮತ್ತು ಇತರ ಪ್ರದೇಶಗಳಲ್ಲಿ ಮತದಾನ ನಡೆಯುವ ಜೂನ್‌ 1ಕ್ಕೂ ಮುನ್ನ ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೆ ಶಂಖ ಊದುವ ಮೂಲಕ ಸಂಕೇತ ನೀಡಿ ಎಂದು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಮಹಿಳೆಯರಿಗೆ ಕರೆ ನೀಡಿದರು.

ಬಿಜೆಪಿ ಅಭ್ಯರ್ಥಿ ರೇಖಾ ಪಾತ್ರಾ ಅವರ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಆಡಳಿತ ಪಕ್ಷಕ್ಕೆ ಮತ ಹಾಕುವಂತೆ ನಿವಾಸಿಗಳನ್ನು ಬೆದರಿಸಲು ಟಿಎಂಸಿ ನಿಯಂತ್ರಿತ ರಾಜ್ಯ ಪೊಲೀಸರು ಮತ್ತು ಇತರರು ಭೇಟಿ ನೀಡುವ ಸಾಧ್ಯತೆಗಳಿವೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!