ಮುಂಬೈಯಲ್ಲಿ ಬೋಟ್ ಮುಳುಗಡೆ: 13 ಮಂದಿ ದಾರುಣ ಸಾವು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮುಂಬೈನ ಗೇಟ್ ವೇ ಆಫ್ ಇಂಡಿಯಾ ಬಳಿ 110 ಪ್ರಯಾಣಿಕರಿದ್ದ ಬೋಟ್ ಸಮುದ್ರದಲ್ಲಿ ಮುಳುಗಡೆಯಾಗಿದೆ. ಕೂಡಲೇ ಮುಂಬೈ ಪೊಲೀಸರು, ನೌಕಾದಳದ ಸಿಬ್ಬಂದಿ ರಕ್ಷಿಸಲು ಹರಸಾಹಸ ಪಟ್ಟಿದ್ದು, ಆದರೆ 13 ಮಂದಿ ಸಾವನ್ನಪ್ಪಿದ್ದಾರೆ.

ಗೇಟ್ ವೇ ಬಳಿ ಪ್ರವಾಸಿಗರಿದ್ದ ಬೋಟ್​ಗೆ ನೌಕಾಪಡೆಯ ಸ್ಪೀಡ್​ ಬೋಟ್​ ಡಿಕ್ಕಿಯಾಗಿದೆ. ಬೋಟ್‌ನಲ್ಲಿರುವ ಪ್ರಯಾಣಿಕರ ರಕ್ಷಣೆಗೆ ನೌಕಾದಳ, ಪೊಲೀಸರು ಕಾರ್ಯಾಚರಣೆ ನಡೆಸಿದರು. ಇದುವರೆಗೂ 101 ಜನರನ್ನು ನೌಕಾಪಡೆ ಸಿಬ್ಬಂದಿ ರಕ್ಷಿಸಿದ್ದು, ದುರಂತದಲ್ಲಿ ಮೃತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ನಾಲ್ವರ ಸ್ಥಿತಿ ಇನ್ನೂ ಗಂಭೀರವಾಗಿದೆ.

ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಅವರು ಈ ಘೋರ ದುರಂತದ ಕ್ಷಣಕ್ಷಣದ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ. ಸಮುದ್ರದಲ್ಲಿ ಪ್ರಯಾಣಿಕರಿದ್ದ ಬೋಟ್ ಮುಳುಗಡೆ ಆಗಿದೆ. ಪ್ರವಾಸಿಗರಿದ್ದ ಬೋಟ್‌ ದುರಂತದಲ್ಲಿ ನೌಕಾಪಡೆಯ ಮೂವರು ಸಿಬ್ಬಂದಿ ಸಹ ಸಾವನ್ನಪ್ಪಿದ್ದಾರೆ.

ಈ ಬೋಟ್‌ನಲ್ಲಿ ಮುಂಬೈ ಬಳಿಯ ಎಲಿಫೆಂಟಾ ಗುಹೆಗಳನ್ನು ನೋಡಲು ಪ್ರವಾಸಿಗರನ್ನು ಕರೆದುಕೊಂಡು ಹೋಗಲಾಗಿತ್ತು. ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಬೋಟ್​ಗೆ ನೌಕಾಪಡೆಯ ಸ್ಪೀಡ್​ ಬೋಟ್​ ಡಿಕ್ಕಿಯಾಗಿದೆ ಎನ್ನಲಾಗಿದೆ. ಘಟನೆ ವೇಳೆ ಬೋಟ್​​ನಲ್ಲಿ 110 ಜನ ಪ್ರಯಾಣಿಕರಿದ್ದರು ಎಂದು ಮಹಾರಾಷ್ಟ್ರ ವಿಧಾನಸಭೆಗೆ ಸಿಎಂ ದೇವೇಂದ್ರ ಫಡ್ನವಿಸ್ ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!